ಬಿವೈ ವಿಜಯೇಂದ್ರ 
ರಾಜ್ಯ

ಬೆಂಗಳೂರು ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಜೂನ್ 13 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಉರುಳಿಸುವವರೆಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದರು.

ಶಿವಮೊಗ್ಗ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4 ರಂದು 11 ಜೀವಗಳನ್ನು ಬಲಿ ಪಡೆದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಘೋಷಿಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವನ್ನು ಉರುಳಿಸುವವರೆಗೆ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದರು.

'ಜೂನ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕಾರ್ಯಕರ್ತರು, ಮೃತ ಕುಟುಂಬಗಳ ಸದಸ್ಯರು ಮತ್ತು ಘಟನೆಯ ಸಂತ್ರಸ್ತರು ಭಾಗವಹಿಸಲಿದ್ದಾರೆ. ಸುಮಾರು 15,000-20,000 ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ' ಎಂದು ಅವರು ಹೇಳಿದರು.

'ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಡಿಎನ್‌ಎ ಆರೋಪಿಗಳಲ್ಲ. ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡನೇ ಆರೋಪಿ ಮತ್ತು ಗೃಹ ಸಚಿವ ಪರಮೇಶ್ವರ ಮೂರನೇ ಆರೋಪಿಯಾಗಿದ್ದಾರೆ. ನಂತರದ ಜವಾಬ್ದಾರಿ ಆರ್‌ಸಿಬಿ, ಕೆಎಸಿಎ ಮತ್ತು ಡಿಎನ್‌ಎ ಮೇಲೆ ಇರುತ್ತವೆ' ಎಂದು ಹೇಳಿದ್ದಾರೆ.

ಬಿಜೆಪಿ ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ನಡೆಸಬೇಕೆಂದು ಒತ್ತಾಯಿಸಿತ್ತು. ಆದರೆ, ಸರ್ಕಾರ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿತು. ಅಲ್ಲದೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದಲೂ ತನಿಖೆಗೂ ಆದೇಶಿಸಿದೆ.

ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಲು, ಅಧಿಕಾರಿಗಳನ್ನು ದೂಷಿಸಲು ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳಲು ರಾಜ್ಯ ಸರ್ಕಾರ ತಮಗಿಷ್ಟವಾದ ವ್ಯಕ್ತಿಯನ್ನು ನೇಮಿಸಿಕೊಂಡಿದೆ. ರಾಜ್ಯ ಸರ್ಕಾರಕ್ಕೆ ನಾಚಿಕೆ ಇದ್ದರೆ, ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ನೋಡಿಕೊಳ್ಳಬೇಕು. ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದರು.

ವಿಧಾನಸೌಧದ ಮೆಟ್ಟಿಲುಗಳ ಬಳಿ ಚಪ್ಪಲಿ ಮತ್ತು ಕಲ್ಲುಗಳನ್ನು ಎಸೆದ ಆರ್‌ಸಿಬಿ ಅಭಿಮಾನಿಗಳನ್ನು ಟೀಕಿಸಿದ ವಿಜಯೇಂದ್ರ, ನಾಯಕರಿಗೆ ಸೆಲ್ಫಿ ಮತ್ತು ಜನಪ್ರಿಯತೆಯ ಹುಚ್ಚು ಇತ್ತು. ಹೀಗಾಗಿ ಅವರು ರಾಜ್ಯದ ಖ್ಯಾತಿಯನ್ನು ಹಾಳು ಮಾಡಿದ್ದಾರೆ. ರಾಜ್ಯಪಾಲರನ್ನೂ ದಾರಿ ತಪ್ಪಿಸಲಾಯಿತು ಮತ್ತು ಕಾರ್ಯಕ್ರಮದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಯಿತು ಎಂದು ಅವರು ಹೇಳಿದರು.

'ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಸಲು ನಾವು ಅವರಿಗೆ ಹೇಳಿದ್ದೇವೆಯೇ? ಮೆರವಣಿಗೆಗೆ ಅನುಮತಿ ಕೋರಿದ್ದೆವು. ಮೆರವಣಿಗೆ ನಡೆಸಿದ್ದರೆ ಬಹುಶಃ ಈ ದುರಂತ ಸಂಭವಿಸುತ್ತಿರಲಿಲ್ಲ" ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಲ್ಲವೇ? ಅದು ವಿರೋಧ ಪಕ್ಷದ ಜವಾಬ್ದಾರಿಯೇ?. ರಾಷ್ಟ್ರದ ಜನರ ಭಾವನೆಗಳನ್ನು ಮುಖ್ಯಮಂತ್ರಿಗೆ ತಿಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳು ಮತ್ತು ದುಃಖಿಸುತ್ತಿರುವವರ ಭಾವನೆಗಳನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರ ಅರ್ಥಮಾಡಿಕೊಳ್ಳಬೇಕೆಂದು ಖಚಿತಪಡಿಸಿಕೊಳ್ಳಲು ಈ ಪತ್ರವನ್ನು ಬರೆಯಲಾಗಿದೆ ಎಂದು ವಿಜಯೇಂದ್ರ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

WPL 2026: ಮೊದಲ ಪಂದ್ಯದಲ್ಲೇ ಸಿನಿಮಾ ತೋರಿಸಿದ RCB, 4 ಎಸೆತಗಳಲ್ಲಿ 20 ರನ್! ಹೀರೋ ಆದ Nadine de Klerk!

SCROLL FOR NEXT