ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಿರಿ; ಸರ್ಕಾರಕ್ಕೆ ಭಾರತೀಯ ಪೊಲೀಸ್​ ಒಕ್ಕೂಟ ಆಗ್ರಹ

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರನ್ನು ಮಾತ್ರ ಹರಕೆಯ ಕುರಿಗಳನ್ನಾಗಿ ಮಾಡಿದ್ದೀರಿ. ಕಾಲ್ತುಳಿತ ದುರಂತದ ಕುರಿತು ನಿಷ್ಪಕ್ಷಪಾತವಾಗಿ ತನಿಖೆಯಾಗಲಿ.

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿಂದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿರುವ ಆದೇಶ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಭಾರತೀಯ ಪೊಲೀಸ್​ ಒಕ್ಕೂಟ ಆಗ್ರಹಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಒಕ್ಕೂಟವು, ವೈಯಕ್ತಿಕ ಜವಾಬ್ದಾರಿಯನ್ನು ಸ್ಥಾಪಿಸದೆ ಕ್ರಮ ಕೈಗೊಳ್ಳುವುದು, ಪೊಲೀಸ್ ಪಡೆಯನ್ನು ಬಲಿಪಶುವನ್ನಾಗಿ ಮಾಡುವುದು ಮತ್ತು ನೈತಿಕತೆಯನ್ನು ಕುಗ್ಗಿಸುವುದಕ್ಕೆ ಸಮಾನವಾಗಿದೆ ಎಂದು ಹೇಳಿದೆ.

ವಿವರವಾದ ತನಿಖೆ ಪೂರ್ಣಗೊಳ್ಳುವ ಮೊದಲು ಹೊರಡಿಸಲಾದ ಅಮಾನತು ಆದೇಶಗಳು ದೇಶಾದ್ಯಂತ ವೃತ್ತಿಪರ ಪೊಲೀಸ್ ಸಮುದಾಯದಲ್ಲಿ ಗಂಭೀರ ಕಳವಳಗಳನ್ನು ಹುಟ್ಟುಹಾಕಿವೆ. ಶಿಸ್ತು ಕ್ರಮ ಅಗತ್ಯವಿದ್ದರೆ, ವಿಚಾರಣೆಗಳ ಆಧಾರದ ಮೇಲೆ ಕೈಗೊಳ್ಳಬೇಕೆ ಹೊರತು, ವಿಚಾರಣೆಗೂ ಮುಂಚಿತವಾಗಿರಬಾರದು.

ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳು, ವಿಶೇಷವಾಗಿ ಕಡಿಮೆ ಸಮಯದಲ್ಲಿ ಆಯೋಜಿಸಲಾದ ಕಾರ್ಯಕ್ರಮಗಳಿಗೆ, ಬಹು ನಾಗರಿಕ, ಆಡಳಿತ ಮತ್ತು ರಾಜಕೀಯ ಸಂಸ್ಥೆಗಳ ನಡುವೆ ಸಂಘಟಿತ ಯೋಜನೆಯ ಅಗತ್ಯವಿರುತ್ತದೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರನ್ನು ಮಾತ್ರ ಹರಕೆಯ ಕುರಿಗಳನ್ನಾಗಿ ಮಾಡಿದ್ದೀರಿ. ಕಾಲ್ತುಳಿತ ದುರಂತದ ಕುರಿತು ನಿಷ್ಪಕ್ಷಪಾತವಾಗಿ ತನಿಖೆಯಾಗಲಿ. ವಿಚಾರಣೆ ಮುಗಿಯುವವರೆಗೆ ಅಮಾನತು ಪೊಲೀಸರನ್ನು ಮರು ನೇಮಿಸಿ. ತನಿಖೆ ನಂತರ ಶಿಸ್ತು ಕ್ರಮ ಅಗತ್ಯವಿದ್ದರೆ, ಕೈಗೊಳ್ಳಿ. ಕಾಲ್ತುಳಿತ ದುರಂತ ಪ್ರಕರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT