ಸಾಂದರ್ಭಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ, 67 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಇಂದು ಒಟ್ಟು 571 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 67 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1287ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 571 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 67 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 459 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 453 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ