2ನೇ ಮದುವೆಯಾಗ್ತಿದ್ದ ಪತಿಗೆ ಹೊಡೆದ ಪತ್ನಿ 
ರಾಜ್ಯ

ಚಿತ್ರದುರ್ಗ: ಕಲ್ಯಾಣ ಮಂಟಪಕ್ಕೆ ನುಗ್ಗಿ, 2ನೇ ಮದುವೆಯಾಗ್ತಿದ್ದ ಗಂಡನಿಗೆ ಚಪ್ಪಲಿಯಿಂದ ಹೊಡೆದ ಪತ್ನಿ; ಮುಂದೆ ಆಗಿದ್ದೇನು?

ಅರಸೀಕೆರೆಯ ತಿಪ್ಪಘಟ್ಟ ನಿವಾಸಿ ಕಾರ್ತಿಕ್ ನಾಯಕ್ ಎಂಬಾತ ಈಗಾಗಲೇ ಮದುವೆಯಾಗಿದ್ದರೂ ಬೇರೊಬ್ಬ ಮಹಿಳೆಯೊಂದಿಗೆ ವಿವಾಹವಾಗಲು ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.

ಚಿತ್ರದುರ್ಗ: ಮದುವೆ ಮಂಟಪಕ್ಕೆ ನುಗ್ಗಿದ ಮಹಿಳೆಯೊಬ್ಬರು, ಗುಟ್ಟಾಗಿ ಎರಡನೇ ಮದುವೆಯಾಗುತ್ತಿದ್ದ ಪತಿಯ ಕೆನ್ನೆಗೆ ಬಾರಿಸಿ ಮದುವೆ ನಿಲ್ಲಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಅರಸೀಕೆರೆಯ ತಿಪ್ಪಘಟ್ಟ ನಿವಾಸಿ ಕಾರ್ತಿಕ್ ನಾಯಕ್ ಎಂಬಾತ ಈಗಾಗಲೇ ಮದುವೆಯಾಗಿದ್ದರೂ ಬೇರೊಬ್ಬ ಮಹಿಳೆಯೊಂದಿಗೆ ವಿವಾಹವಾಗಲು ಸಿದ್ಧತೆ ನಡೆಸಿದ್ದ ಎನ್ನಲಾಗಿದೆ.

ದಾವಣಗೆರೆ ಜಿಲ್ಲೆಯ ಮುಶೆನಾಳದ ಅವರ ಪತ್ನಿ ತನುಜಾ ಅವರು ತಮ್ಮ ಕುಟುಂಬದೊಂದಿಗೆ ಮದುವೆ ಮಂಟಪಕ್ಕೆ ನುಗ್ಗಿ ನುಗ್ಗಿದ್ದು, ಎಲ್ಲರ ಎದುರು ತನ್ನ ಪತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ವರದಕ್ಷಿಣೆಗಾಗಿ ಮರುಮದುವೆಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಚಪ್ಪಲಿಯಿಂದ ಹೊಡೆದಿದ್ದಾಳೆ.

ಇದರಿಂದ ಕಾರ್ತಿಕ್ ಅವರ ಮೊದಲ ಮದುವೆಯ ಬಗ್ಗೆ ತಿಳಿದಿಲ್ಲದ ಎರಡನೇ ವಧುವಿನ ಕುಟುಂಬ ಆಘಾತಕ್ಕೊಳಗಾಗಿ, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಚಿತ್ರದುರ್ಗ ನಗರ ಪೊಲೀಸರು ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಕಳೆದ ತಿಂಗಳು ಹಾಸನದಲ್ಲಿ ಕೊನೆ ಕ್ಷಣದಲ್ಲಿ ವಧು ನಿರಾಕರಿಸಿದ್ದರಿಂದ ಮದುವೆ ಮುರಿದುಬಿದ್ದಿತ್ತು. ನಾನು ಬೇರೆ ಯುವಕನನ್ನು ಪ್ರೀತಿಸುತ್ತದ್ದೇನೆ. ಈ ಮದುವೆ ಬೇಡ ಎಂದು ಹೇಳಿ ಯುವತಿ ಮದುವೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರಾಹಕರೇ ಎಚ್ಚರ...: Gas crisis ಸೈಬರ್ ವಂಚಕರಿಗೆ ಬಂಡವಾಳ; ಈ ಬಗ್ಗೆ ತಿಳಿದಿರಬೇಕಾದ ಮಾಹಿತಿ ಇದು...

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?

'ಐರಿಸ್ ಡೆನಾ' ದಾಳಿಗೆ ತಕ್ಕ ಪ್ರತ್ಯುತ್ತರ ನೀಡದೇ ಬಿಡುವುದಿಲ್ಲ: ಇರಾನ್ ಸೇನಾ ಮುಖ್ಯಸ್ಥ

ದೇಶದಲ್ಲಿ ವಾಣಿಜ್ಯ LPG ಸಿಲಿಂಡರ್ ಕೊರತೆ: ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು- ಪ್ರಿಯಾಂಕ್ ಖರ್ಗೆ ಕಿಡಿ!

ಇರಾನ್‌ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್

SCROLL FOR NEXT