ಹಂಪಿ 
ರಾಜ್ಯ

ಹಂಪಿ: ಕಳೆದ ಮೂರು ದಿನಗಳಲ್ಲಿ 55,000 ಪ್ರವಾಸಿಗರು ಭೇಟಿ!

ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಆಗಮಿಸುತ್ತಿದ್ದು, ಹಂಪಿಯ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ ಎಂದು ತಿಳಿಸಿದರು.

ಹಂಪಿ: ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಕಳೆದ ಮೂರು ದಿನಗಳಲ್ಲಿ 55,000 ಪ್ರವಾಸಿಗರು ಭೇಟಿ ನೀಡಿದ್ದಾರೆ. ಭಾರೀ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ನೆಚ್ಚಿಕೊಂಡಿರುವವರಿಗೂ ಅನುಕೂಲವಾಗಿದೆ.

ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಆಗಮಿಸುತ್ತಿದ್ದು, ಹಂಪಿಯ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ ಎಂದು ತಿಳಿಸಿದರು.

ವಿಜಯ ವಿಠಲ ದೇವಸ್ಥಾನ, ವಿರೂಪಾಕ್ಷ ದೇವಸ್ಥಾನ, ಮಾತಂಗ ಕಿಲ್ಸ್, ಉಗ್ರ ನರಸಿಂಹ ಮತ್ತಿತರ ಅನೇಕ ಸ್ಥಳಗಳು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ವಿಪರೀತ ಜನದಟ್ಟಣೆಯಿಂದಾಗಿ ಸ್ಥಳೀಯ ವ್ಯಾಪಾರ ಬಿರುಸುಗೊಂಡಿದ್ದು, ಪ್ರವಾಸಿಗರಿಗೆ ಹಂಪಿ ಹಾಗೂ ಇಲ್ಲಿನ ಸ್ಮಾರಕಗಳ ಬಗ್ಗೆ ವಿವರ ಒದಗಿಸಲಾಗುವುದು ಎಂದು ಅವರು ಹೇಳಿದರು.

ಹಂಪಿ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಒಂದಾಗಿದ್ದು, ಇಲ್ಲಿಗೆ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ವಿಜಯನಗರ ಜಿಲ್ಲಾ ಪೊಲೀಸರು ಜನಸಂದಣಿಯನ್ನು ನಿಭಾಯಿಸಲು ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

ಪೊಲೀಸರ ಜನಸ್ನೇಹಿ ಗುಣವನ್ನು ಹಲವರು ಶ್ಲಾಘಿಸಿದರು. ಸಾಮಾನ್ಯವಾಗಿ ಪ್ರತಿ ವರ್ಷ ಮುಂಗಾರು ಮಳೆಯಿಂದಾಗಿ ಜೂನ್‌ನಿಂದ ಆಗಸ್ಟ್‌ವರೆಗೆ ಜನಸಂದಣಿ ಕಡಿಮೆ ಇರುತ್ತದೆ, ಆದರೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನಸಂದಣಿ ಇತ್ತು.

ಪ್ರವಾಸಿಗರಿಗೆ ಹಲವು ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಿದ್ದೇವೆ. ಈಗಾಗಲೇ ಸಾಕಷ್ಟು ಕುಡಿಯುವ ನೀರಿನ ಘಟಕ, ಶೌಚಾಲಯ, ವಾಹನ ನಿಲುಗಡೆಗೆ ಅವಕಾಶವಿದೆ. ಹಂಪಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಿದ್ದೇವೆ ಎಂದು ವಿಜಯನಗರ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಕಳೆದ ಮೂರು ದಿನಗಳಲ್ಲಿ ಪ್ರವಾಸಿಗರು ಸ್ಮಾರಕಗಳು, ಸುತ್ತಮುತ್ತಲಿನ ಬೆಟ್ಟಗಳನ್ನು ವೀಕ್ಷಿಸಿ ಆನಂದಿಸಿದರು. ಬಹುತೇಕ ಎಲ್ಲಾ ಹೋಂಸ್ಟೇಗಳು ಪ್ರವಾಸಿಗರಿಂದ ತುಂಬಿದ್ದವು. ಆದಾಗ್ಯೂ, ಕೆಲವು ಪ್ರವಾಸಿಗರು ಸರಿಯಾದ ಮೂಲಭೂತ ಸೌಕರ್ಯ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT