ರಾಜ್ಯ

ಬೆಂಗಳೂರು: ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ.

ಬೆಂಗಳೂರು: ಹಾಸನ ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿರುವ ನಿಶಾಂತ್ ಗೌಡ ಡಿಪ್ಲೋಮಾ ಮುಗಿಸಿದ್ದು 15 ದಿನಗಳ ಹಿಂದೆ ಹಾಸನದಿಂದ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದರು. ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ನಿಶಾಂತ್ ಗೌಡಗೆ ಕಳೆದ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರವನ್ನು ಸ್ನೇಹಿತರಿಗೂ ತಿಳಿಸಿದ್ದ. ಆದರೆ ಬೆಳಗ್ಗೆ ಎಷ್ಟೊತ್ತಾದರೂ ನಿಶಾಂತ್ ಎಚ್ಚರಗೊಂಡಿರಲಿಲ್ಲ. ಹೀಗಾಗಿ ನಿಶಾಂತ್ ನನ್ನು ಸ್ನೇಹಿತರು ಎಬ್ಬಿಸಲು ಮುಂದಾದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಪಿ ನಗರ ಪೊಲೀಸರು ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT