ರಾಜ್ಯ

ಬೆಂಗಳೂರು: ಹಾಸನ ಮೂಲದ 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ.

ಬೆಂಗಳೂರು: ಹಾಸನ ಮೂಲದ ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿರುವ ನಿಶಾಂತ್ ಗೌಡ ಡಿಪ್ಲೋಮಾ ಮುಗಿಸಿದ್ದು 15 ದಿನಗಳ ಹಿಂದೆ ಹಾಸನದಿಂದ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದರು. ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ನಿಶಾಂತ್ ಗೌಡಗೆ ಕಳೆದ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರವನ್ನು ಸ್ನೇಹಿತರಿಗೂ ತಿಳಿಸಿದ್ದ. ಆದರೆ ಬೆಳಗ್ಗೆ ಎಷ್ಟೊತ್ತಾದರೂ ನಿಶಾಂತ್ ಎಚ್ಚರಗೊಂಡಿರಲಿಲ್ಲ. ಹೀಗಾಗಿ ನಿಶಾಂತ್ ನನ್ನು ಸ್ನೇಹಿತರು ಎಬ್ಬಿಸಲು ಮುಂದಾದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಪಿ ನಗರ ಪೊಲೀಸರು ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT