ಬಂಧಿತ ಆರೋಪಿಗಳಾದ ಈಶ್ವರ್ ಸಿಂಗ್, ನಾರಾಯಣ್ ಸಿಂಗ್ 
ರಾಜ್ಯ

ಬೆಂಗಳೂರು: 'ಡಿಜಿಟಲ್ ಅರೆಸ್ಟ್'; ವೃದ್ಧ ದಂಪತಿಗೆ 4.79 ಕೋಟಿ ರೂ ವಂಚನೆ; ಇಬ್ಬರು ಸುಲಿಗೆಕೋರರ ಬಂಧನ!

ಜೆಪಿ ನಗರದಲ್ಲಿ ವಾಸಿಸುವ ಸಂತ್ರಸ್ತ ದಂಪತಿಗಳನ್ನು ಮಾರ್ಚ್ 19 ರಿಂದ ಮೇ 15 ರವರೆಗೆ ಸುಮಾರು ಮೂರು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ನಲ್ಲಿ ಇರಿಸಲಾಗಿತ್ತು.

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ ವೃದ್ಧ ದಂಪತಿಯಿಂದ ರೂ. 4.79 ಕೋಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಈಶ್ವರ್ ಸಿಂಗ್ ಮತ್ತು ನಾರಾಯಣ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ. ಜೆಪಿ ನಗರದಲ್ಲಿ ವಾಸಿಸುವ ಸಂತ್ರಸ್ತ ದಂಪತಿಗಳನ್ನು ಮಾರ್ಚ್ 19 ರಿಂದ ಮೇ 15 ರವರೆಗೆ ಸುಮಾರು ಮೂರು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ನಲ್ಲಿ ಇರಿಸಲಾಗಿತ್ತು.

ದೂರುದಾರರಾದ ಮಂಜುನಾಥ್ (77) ನೈಜೀರಿಯಾದಲ್ಲಿ 31 ವರ್ಷಗಳಿಂದ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಅವರಿಬ್ಬರ ಮಕ್ಕಳು ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದರು. ಅಲ್ಲದೇ, ನಕಲಿ ಬಂಧನ ವಾರೆಂಟ್ ಪ್ರತಿ ಕಳುಹಿಸಿ, ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ಬೆದರಿದ ದಂಪತಿಗಳು ವಂಚಕರಾದ ಈಶ್ವರ್ ಖಾತೆಗೆ ರೂ. 10 ಲಕ್ಷ ಹಾಗೂ ನಾರಾಯಣ್ ಖಾತೆಗೆ 1.8 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಅವರ ಬ್ಯಾಂಕ್ ವಿವರಗಳನ್ನು ಬಳಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

"ವೃದ್ಧ ದಂಪತಿಗಳು ದಕ್ಷಿಣ ವಿಭಾಗದಲ್ಲಿ ನೆಲೆಸಿದ್ದರೂ ಸುಳಿವು ಆಧರಿಸಿ ಅವರನ್ನು ರಕ್ಷಿಸಲಾಗಿದೆ. ಆರೋಪಿಗಳು ಶ್ರೀಲಂಕಾದ ಕ್ಯಾಸಿನೊದಲ್ಲಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಗೊಳಿಸಿ ಬಂಧಿಸಲಾಗಿದೆ. ಡಿಜಿಟಲ್ ಬಂಧನದ ಬಗ್ಗೆ ಸಂತ್ರಸ್ತರು ತಮ್ಮ ಮಕ್ಕಳಿಗೆ ತಿಳಿಸಿಲ್ಲ. ಪ್ರಕರಣ ಇನ್ನೂ ತನಿಖೆಯಲ್ಲಿದೆ. ಆರೋಪಿಗಳಿಂದ ಹೆಚ್ಚಿನ ವಿವರಗಳನ್ನು ಸಂಗ್ರಹಿಸಬೇಕಾಗಿದೆ," ಎಂದು ಡಿಸಿಪಿ ಸಾರಾ ಫಾತಿಮಾ ಹೇಳಿದರು.

ಆರೋಪಿಗಳು ಸುಲಿಗೆ ಮಾಡಿದ ಹಣವನ್ನು ಶ್ರೀಲಂಕಾದ ಕ್ಯಾಸಿನೊದಲ್ಲಿ ಮೋಜು-ಮಸ್ತಿಯಲ್ಲಿ ಕಳೆಯುತ್ತಿದ್ದರು. ಮೇ ತಿಂಗಳಲ್ಲಿ ದೂರು ದಾಖಲಾಗಿತ್ತು. ಸೈಬರ್ ವಂಚಕರು ಸಂತ್ರಸ್ತರ ಆಸ್ತಿ ದಾಖಲೆಗಳ ನಕಲು ಪ್ರತಿಗಳನ್ನು ಸಹ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT