ಬಂಧಿತ ಆರೋಪಿಗಳಾದ ಈಶ್ವರ್ ಸಿಂಗ್, ನಾರಾಯಣ್ ಸಿಂಗ್ 
ರಾಜ್ಯ

ಬೆಂಗಳೂರು: 'ಡಿಜಿಟಲ್ ಅರೆಸ್ಟ್'; ವೃದ್ಧ ದಂಪತಿಗೆ 4.79 ಕೋಟಿ ರೂ ವಂಚನೆ; ಇಬ್ಬರು ಸುಲಿಗೆಕೋರರ ಬಂಧನ!

ಜೆಪಿ ನಗರದಲ್ಲಿ ವಾಸಿಸುವ ಸಂತ್ರಸ್ತ ದಂಪತಿಗಳನ್ನು ಮಾರ್ಚ್ 19 ರಿಂದ ಮೇ 15 ರವರೆಗೆ ಸುಮಾರು ಮೂರು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ನಲ್ಲಿ ಇರಿಸಲಾಗಿತ್ತು.

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ ವೃದ್ಧ ದಂಪತಿಯಿಂದ ರೂ. 4.79 ಕೋಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಈಶ್ವರ್ ಸಿಂಗ್ ಮತ್ತು ನಾರಾಯಣ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ. ಜೆಪಿ ನಗರದಲ್ಲಿ ವಾಸಿಸುವ ಸಂತ್ರಸ್ತ ದಂಪತಿಗಳನ್ನು ಮಾರ್ಚ್ 19 ರಿಂದ ಮೇ 15 ರವರೆಗೆ ಸುಮಾರು ಮೂರು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ನಲ್ಲಿ ಇರಿಸಲಾಗಿತ್ತು.

ದೂರುದಾರರಾದ ಮಂಜುನಾಥ್ (77) ನೈಜೀರಿಯಾದಲ್ಲಿ 31 ವರ್ಷಗಳಿಂದ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಅವರಿಬ್ಬರ ಮಕ್ಕಳು ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿದ್ದ ಸೈಬರ್ ವಂಚಕರು, ನಿಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದ್ದರು. ಅಲ್ಲದೇ, ನಕಲಿ ಬಂಧನ ವಾರೆಂಟ್ ಪ್ರತಿ ಕಳುಹಿಸಿ, ಬಂಧನದಿಂದ ತಪ್ಪಿಸಿಕೊಳ್ಳಲು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ಬೆದರಿದ ದಂಪತಿಗಳು ವಂಚಕರಾದ ಈಶ್ವರ್ ಖಾತೆಗೆ ರೂ. 10 ಲಕ್ಷ ಹಾಗೂ ನಾರಾಯಣ್ ಖಾತೆಗೆ 1.8 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಅವರ ಬ್ಯಾಂಕ್ ವಿವರಗಳನ್ನು ಬಳಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

"ವೃದ್ಧ ದಂಪತಿಗಳು ದಕ್ಷಿಣ ವಿಭಾಗದಲ್ಲಿ ನೆಲೆಸಿದ್ದರೂ ಸುಳಿವು ಆಧರಿಸಿ ಅವರನ್ನು ರಕ್ಷಿಸಲಾಗಿದೆ. ಆರೋಪಿಗಳು ಶ್ರೀಲಂಕಾದ ಕ್ಯಾಸಿನೊದಲ್ಲಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಗೊಳಿಸಿ ಬಂಧಿಸಲಾಗಿದೆ. ಡಿಜಿಟಲ್ ಬಂಧನದ ಬಗ್ಗೆ ಸಂತ್ರಸ್ತರು ತಮ್ಮ ಮಕ್ಕಳಿಗೆ ತಿಳಿಸಿಲ್ಲ. ಪ್ರಕರಣ ಇನ್ನೂ ತನಿಖೆಯಲ್ಲಿದೆ. ಆರೋಪಿಗಳಿಂದ ಹೆಚ್ಚಿನ ವಿವರಗಳನ್ನು ಸಂಗ್ರಹಿಸಬೇಕಾಗಿದೆ," ಎಂದು ಡಿಸಿಪಿ ಸಾರಾ ಫಾತಿಮಾ ಹೇಳಿದರು.

ಆರೋಪಿಗಳು ಸುಲಿಗೆ ಮಾಡಿದ ಹಣವನ್ನು ಶ್ರೀಲಂಕಾದ ಕ್ಯಾಸಿನೊದಲ್ಲಿ ಮೋಜು-ಮಸ್ತಿಯಲ್ಲಿ ಕಳೆಯುತ್ತಿದ್ದರು. ಮೇ ತಿಂಗಳಲ್ಲಿ ದೂರು ದಾಖಲಾಗಿತ್ತು. ಸೈಬರ್ ವಂಚಕರು ಸಂತ್ರಸ್ತರ ಆಸ್ತಿ ದಾಖಲೆಗಳ ನಕಲು ಪ್ರತಿಗಳನ್ನು ಸಹ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT