ಸಂಗ್ರಹ ಚಿತ್ರ 
ರಾಜ್ಯ

ಜಾತಿ ಮರು ಸಮೀಕ್ಷೆ: ಸರ್ಕಾರದ ನಡೆ ಸ್ವಾಗತಿಸಿದ ಲಿಂಗಾಯತರು-ಒಕ್ಕಲಿಗರು

ಹಳೆಯ ವರದಿಯನ್ನು ರದ್ದುಗೊಳಿಸಿ ಹೊಸ ಸಮೀಕ್ಷೆಗೆ ಆದೇಶಿಸುವ ಕಾಂಗ್ರೆಸ್ ನಾಯಕತ್ವದ ನಿರ್ಧಾರವನ್ನು ಲಿಂಗಾಯಕರು ಹಾಗೂ ಒಕ್ಕಲಿಗ ನಾಯಕರು ಶ್ಲಾಘಿಸಿದ್ದಾರೆ.

ಬೆಂಗಳೂರು: ಜಾತಿ ಮರು ಸಮೀಕ್ಷೆ ಕುರಿತ ರಾಜ್ಯ ಸರ್ಕಾರದ ನಿರ್ಧಾರವವನ್ನು ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರು ಸ್ವಾಗತಿಸಿದ್ದಾರೆ.

ಹಳೆಯ ವರದಿಯನ್ನು ರದ್ದುಗೊಳಿಸಿ ಹೊಸ ಸಮೀಕ್ಷೆಗೆ ಆದೇಶಿಸುವ ಕಾಂಗ್ರೆಸ್ ನಾಯಕತ್ವದ ನಿರ್ಧಾರವನ್ನು ಲಿಂಗಾಯಕರು ಹಾಗೂ ಒಕ್ಕಲಿಗ ನಾಯಕರು ಶ್ಲಾಘಿಸಿದ್ದಾರೆ,

ಮೀಸಲಾತಿ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಆದರೆ, ವೈಜ್ಞಾನಿಕ ಅಧ್ಯಯನಕ್ಕೆ ಒತ್ತಾಯಿಸುತ್ತಿದ್ದೆವು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಹೇಳಿದೆ.

ನಮ್ಮ ಮುಂದಿನ ನಡೆ ಕುರಿತು ಜೂನ್ 12 ಅಥವಾ 13 ರಂದು ಸಭೆ ನಡೆಸಲಾಗುವುದು ಎಂದು ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅವರು ಹೇಳಿದ್ದಾರೆ.

ರಾಜ್ಯ ಒಕ್ಕಲಿಗರ ಮೀಸಲಾತಿ ಸಮಿತಿಯ ಜಿ.ಎನ್. ಶ್ರೀಕಂಠಯ್ಯ ಮತ್ತು ಇತರರು ಕೂಡ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ. ಕುಮಾರ್ ಅವರು ಮಾತನಾಡಿ, ಕೊನೆಗೂ ಸಮುದಾಯಕ್ಕೆ ನ್ಯಾಯ ಸಿಕ್ಕಿಗೆ ಎಂದು ಹೇಳಿದರು.

ಇದು 10 ವರ್ಷಗಳ ಹೋರಾಟವಾಗಿತ್ತು. ನಮ್ಮ ಕಠಿಣ ಪರಿಶ್ರಮಕ್ಕೆ ಜಯ ಸಿಕ್ಕಿದೆ. "ನಾವು ವೈಜ್ಞಾನಿಕ ಮತ್ತು ಸಮಗ್ರವಾದ ಹೊಸ ಸಮೀಕ್ಷೆಯನ್ನು ಒತ್ತಾಯಿಸಿದ್ದೆವು. ಇಂದು, ಸಿಎಂ, ಡಿಸಿಎಂ ಮತ್ತು ಕಾಂಗ್ರೆಸ್ ಮಂತ್ರಿಗಳು ಮರು ಸಮೀಕ್ಷೆ ಕುರಿತು ಘೋ,ಣೆ ಮಾಡಿದ್ದಾರೆ. ನಮ್ಮೊಂದಿಗೆ ನಿಂತ ನಮ್ಮ ಎಲ್ಲಾ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ಬುಧವಾರ ಸಭೆ ನಡೆಸುತ್ತೇವೆ.. ನಮ್ಮ ಮಹಾನ್ ಕವಿ ಕುವೆಂಪು ಹೇಳಿದಂತೆ: 'ಸರ್ವರಿಗು ಸಮಪಾಲು' ಸಿಗಬೇಕು. ನಾವು ಬಯಸುತ್ತಿರುವದಷ್ಟೇ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT