ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ (ಸಾಂದರ್ಭಿಕ ಚಿತ್ರ) 
ರಾಜ್ಯ

ಬನ್ನೇರುಘಟ್ಟ ಸಫಾರಿಗೆ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನ ಬಳಕೆ!

ಅರಣ್ಯ ಪ್ರದೇಶದ ಸಫಾರಿಯನ್ನು ಪರಿಸರ ಸ್ನೇಹಿಯನ್ನಾಗಿಸಲು ಬನ್ನೇರುಘಟ್ಟ ಸಫಾರಿಗೆ ವಿದ್ಯುತ್‌ ಚಾಲಿತ ವಾಹನ ಬಳಕೆಗೆ ನಿರ್ಧರಿಸಲಾಗಿದೆ.

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ಸಫಾರಿಗೆ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಪ್ರದೇಶದ ಸಫಾರಿಯನ್ನು ಪರಿಸರ ಸ್ನೇಹಿಯನ್ನಾಗಿಸಲು ಬನ್ನೇರುಘಟ್ಟ ಸಫಾರಿಗೆ ವಿದ್ಯುತ್‌ ಚಾಲಿತ ವಾಹನ ಬಳಕೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.

ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಅರಣ್ಯ ಇಲಾಖೆ ಪ್ರಯತ್ನ ಸಫಲವಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ವಾಹನ ಬಳಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬನ್ನೇರುಘಟ್ಟ ಜೈವಿಕ ಉದ್ಯಾನವನ ಕಾರ್ಯನಿರ್ವಾಹಕ ಎವಿ ಸೂರ್ಯ ಸೇನ್ ಅವರು ಮಾತನಾಡಿ, ಇವಿ ಬಸ್ ಅನ್ನು ಒಂದು ತಿಂಗಳ ಪ್ರಾಯೋಗಿಕ ಆಧಾರದ ಮೇಲೆ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಸಫಾರಿ ವಾಹನಗಳಿಗೆ ಬಳಸುವ ಎಲೆಕ್ಟ್ರಿಕ್ ವಾಹನಗಳಿಗೆ ಇವಿ ಚಾರ್ಜಿಂಗ್ ಘಟಕ ಸ್ಥಾಪಿಸುವಂತೆ ಬಿಎಂಟಿಸಿಗೆ ಮನವಿ ಮಾಡಲಾಗಿದೆ. ಎಲ್ಲವೂ ಅಂದುಕೊಂಡಂತೆಯೇ ಆದರೆ, ಎಲ್ಲಾ ಸಫಾರಿ ವಾಹನಗಳನ್ನು ಹಂತ ಹಂತವಾಗಿ ಎಲೆಕ್ಟ್ರಿಕ್ ವಾಹನಗಳಾಗಿ ಬದಲಾಯಿಸಲಾಗುವುದು ಎಂದು ತಿಳಿಸಿದರು.

ಸಫಾರಿಯಲ್ಲಿ ಪ್ರಸ್ತುತ ಪ್ರಾಯೋಗಿದ ಆಧಾರದ ಮೇಲೆ ಇವಿ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ. ಪ್ರತಿಯೊಂದು ಸಫಾರಿ ವಾಹನವು ಕನಿಷ್ಠ ಎಂಟು ಟ್ರಿಪ್‌ಗಳು ಕಾರ್ಯನಿರ್ವಹಿಸಲಿವೆ. ಈ ವೇಳೆ ವಾಹನಗಳ ಕಾರ್ಯಾಚರಣೆ, ಚಾರ್ಜಿಂಗ್ ಮತ್ತು ಇತರೆ ಸಮಸ್ಯೆಗಳ ಕುರಿತು ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ. ಇದರಲ್ಲಿ ಯಶಸ್ವಿಯಾಗಿದ್ದೇ ಆದರೆ, ಎಲ್ಲಾ ವಾಹನಗಳನ್ನು ಬದಲಾಯಿಸಲಾಗುವುದು. ಇದರಿಂದ ಮೃಗಾಲಯದ ನಿರ್ವಹಣೆಯು ಆರ್ಥಿಕತೆಯನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT