ಮೃತ ಬಾಲಕಿ ತನಿಷ್ಕಾ ಎಸ್ 
ರಾಜ್ಯ

ಬೆಂಗಳೂರು: ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶ; 11 ವರ್ಷದ ಬಾಲಕಿ ದಾರುಣ ಸಾವು

ಮೃತ ಬಾಲಕಿಯನ್ನು ನಾರಾಯಣಘಟ್ಟದ ​​ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಗರದ ಹೊರವಲಯದ ಆನೇಕಲ್ ಬಳಿ ಮನೆಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ಬಾಲಕಿಯನ್ನು ನಾರಾಯಣಘಟ್ಟದ ​​ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಬಾಲಕಿ ತನ್ನ ಮನೆಯ ಹೊರಗೆ ಚೆಂಡಿನಿಂದ ಆಟವಾಡುತ್ತಿದ್ದಾಗ, ಮನೆ ಮುಂದೆ ಇದ್ದ ವಿದ್ಯುತ್ ಕಂಬದ ಬಳಿಗೆ ಚೆಂಡು ಹೋಗಿದೆ. ಅದನ್ನು ತೆಗೆದುಕೊಳ್ಳಲು ಕಂಬದ ಬಳಿ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕುಸಿದು ಬಿದ್ದಿದ್ದಾಳೆ.

ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅರ್ಥಿಂಗ್ (ಗ್ರೌಂಡಿಂಗ್) ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಮಳೆಯೂ ಬಂದಿದ್ದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರಬಹುದು. ಆದರೂ, ಇದನ್ನು ಪರಿಶೀಲಿಸಬೇಕಾಗಿದ್ದು, ಎಫ್‌ಎಸ್‌ಎಲ್ ತಂಡದ ತಜ್ಞರನ್ನು ಕರೆಸಿ ಸ್ಥಳವನ್ನು ಪರಿಶೀಲಿಸಲು ಮತ್ತು ಘಟನೆಗೆ ಕಾರಣವಾದ ಲೋಪಗಳನ್ನು ನಿರ್ಧರಿಸಲು ಮುಂದಾಗಿದ್ದೇವೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

'ಎಫ್‌ಎಸ್‌ಎಲ್ ತಂಡವು ಪರಿಶೀಲನೆಯ ನಂತರ ಸಲ್ಲಿಸುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!