ಸೋಮಣ್ಣ 
ರಾಜ್ಯ

ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ

ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕ ಯೋಜನೆಯಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬುಧವಾರ ಆಗ್ರಹಿಸಿದರು.

ತಾಲೂಕಿನ ನಿಟ್ಟೂರು ಹೋಬಳಿ ಸುಂಕಪುರ ಬಳಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಲ್ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ. ರಾಜ್ಯ ಸರ್ಕಾರ ಪಾಪದ ವ್ಯವಸ್ಥೆಯಲ್ಲಿ ಮುಂಂದಿನ ದಿನಗಳಲ್ಲಿ ಶಾಪಗ್ರಸ್ತವಾಗಬಹುದು ಇದನ್ನು ಅರ್ಥ ಕಾಮಗಾರಿಯನ್ನು ಸ್ಥಗಿತ ಮಾಡಬೇಕು ಎಂದು ಹೇಳಿದರು.

ಗುಬ್ಬಿ ತಾಲೂಕಿಗೆ ಆಗಿರುವಂತ ಅನ್ಯಾಯವನ್ನು ಸರಿಪಡಿಸುವ ಜವಾಬ್ದಾರಿ ನನ್ನದು. ಇದನು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರಿಪಡಿಸುತ್ತೇನೆ. ಕಾಮಗಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಡಿಕೆ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ. ಅಧಿಕಾರಿಗಳು ನಾನೊಬ್ಬ ಕೇಂದ್ರ ಸಚಿವ ಇದ್ದೇನೆ ಎಂಬುದನ್ನು ಮರೆಯಬಾರದು.

ಒಂದೊಂದು ಸರ್ಕಾರ ಬಂದಾಗ ಒಂದೊಂದು ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ. ಇಂದು ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಇದಕ್ಕೆ ನಾವುಗಳು ಪರಿಹಾರ ಹುಡುಕಬೇಕಾಗಿದೆ. ಜನಪರ ಕಾರ್ಯಕ್ರಮಗಳಿಗೆ ಹಕ್ಕುಚ್ಯುತಿಯಾಗುವುದಕ್ಕೆ ವಿ.ಸೋಮಣ್ಣ ಬಿಡುವುದಿಲ್ಲ ಮತ್ತು ಸೋಲುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಯೋಜನೆ ತುಮಕೂರಿನ ರೈತರ ಮೇಲೆ ಪರಿಣಾಮ ಬೀರುತ್ತಿದ್ದರೂ, ಯೋಜನೆಯ ಪರವಾಗಿ ಕಾರ್ಯಸಾಧ್ಯತಾ ವರದಿಯನ್ನು ನೀಡಿದ ತಜ್ಞರ ಸಮಿತಿ ಮುಖ್ಯಸ್ಥ, ನಿವೃತ್ತ ಎಂಜಿನಿಯರ್ ಜಯಪ್ರಕಾಶ್ ಮತ್ತು ಡಿ.ಕೆ. ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಅವರನ್ನು ಸೋಮಣ್ಣ ಅವರು ತರಾಟೆಗೆ ತೆಗೆದುಕೊಂಡರು.

ಯೋಜನೆಗಾಗಿ ಗುತ್ತಿಗೆದಾರರು ಈಗಾಗಲೇ ನೂರಾರು ಕೋಟಿ ಮೌಲ್ಯದ ಪೈಪ್‌ಗಳನ್ನು ಖರೀದಿಸಿದ್ದು, ಸರ್ಕಾರ ಈಗಾಗಲೇ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಹಚರರಾದ ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್ ಗೌಡ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರು ಸೋಮಣ್ಣ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿತ್ತು. ನಂತರ ವಿಜಯೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ ನಂತರ ಸುರೇಶ್ ಹಾಗೂ ರವಿಶಂಕರ್ ಅವರೂ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿಚಾರ ತಣ್ಣಗಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

IPL 2026: ಕೊನೆಯ ಎಸೆತದಲ್ಲಿ RCBಗೆ ರೋಚಕ ಜಯ; MI ವಿರುದ್ಧದ ಪಂದ್ಯ ಗೆಲ್ಲಿಸಿದ ಕೃನಾಲ್, ಭುವಿ; ಅಗ್ರಸ್ಥಾನಕ್ಕೇರಿದ ಆರ್‌ಸಿಬಿ!

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

SCROLL FOR NEXT