ಸೋಮಣ್ಣ 
ರಾಜ್ಯ

ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ

ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕ ಯೋಜನೆಯಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬುಧವಾರ ಆಗ್ರಹಿಸಿದರು.

ತಾಲೂಕಿನ ನಿಟ್ಟೂರು ಹೋಬಳಿ ಸುಂಕಪುರ ಬಳಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಲ್ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ. ರಾಜ್ಯ ಸರ್ಕಾರ ಪಾಪದ ವ್ಯವಸ್ಥೆಯಲ್ಲಿ ಮುಂಂದಿನ ದಿನಗಳಲ್ಲಿ ಶಾಪಗ್ರಸ್ತವಾಗಬಹುದು ಇದನ್ನು ಅರ್ಥ ಕಾಮಗಾರಿಯನ್ನು ಸ್ಥಗಿತ ಮಾಡಬೇಕು ಎಂದು ಹೇಳಿದರು.

ಗುಬ್ಬಿ ತಾಲೂಕಿಗೆ ಆಗಿರುವಂತ ಅನ್ಯಾಯವನ್ನು ಸರಿಪಡಿಸುವ ಜವಾಬ್ದಾರಿ ನನ್ನದು. ಇದನು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರಿಪಡಿಸುತ್ತೇನೆ. ಕಾಮಗಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಡಿಕೆ ಶಿವಕುಮಾರ್‌ ಜೊತೆ ಮಾತನಾಡುತ್ತೇನೆ. ಅಧಿಕಾರಿಗಳು ನಾನೊಬ್ಬ ಕೇಂದ್ರ ಸಚಿವ ಇದ್ದೇನೆ ಎಂಬುದನ್ನು ಮರೆಯಬಾರದು.

ಒಂದೊಂದು ಸರ್ಕಾರ ಬಂದಾಗ ಒಂದೊಂದು ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ. ಇಂದು ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಇದಕ್ಕೆ ನಾವುಗಳು ಪರಿಹಾರ ಹುಡುಕಬೇಕಾಗಿದೆ. ಜನಪರ ಕಾರ್ಯಕ್ರಮಗಳಿಗೆ ಹಕ್ಕುಚ್ಯುತಿಯಾಗುವುದಕ್ಕೆ ವಿ.ಸೋಮಣ್ಣ ಬಿಡುವುದಿಲ್ಲ ಮತ್ತು ಸೋಲುವುದಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಯೋಜನೆ ತುಮಕೂರಿನ ರೈತರ ಮೇಲೆ ಪರಿಣಾಮ ಬೀರುತ್ತಿದ್ದರೂ, ಯೋಜನೆಯ ಪರವಾಗಿ ಕಾರ್ಯಸಾಧ್ಯತಾ ವರದಿಯನ್ನು ನೀಡಿದ ತಜ್ಞರ ಸಮಿತಿ ಮುಖ್ಯಸ್ಥ, ನಿವೃತ್ತ ಎಂಜಿನಿಯರ್ ಜಯಪ್ರಕಾಶ್ ಮತ್ತು ಡಿ.ಕೆ. ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಅವರನ್ನು ಸೋಮಣ್ಣ ಅವರು ತರಾಟೆಗೆ ತೆಗೆದುಕೊಂಡರು.

ಯೋಜನೆಗಾಗಿ ಗುತ್ತಿಗೆದಾರರು ಈಗಾಗಲೇ ನೂರಾರು ಕೋಟಿ ಮೌಲ್ಯದ ಪೈಪ್‌ಗಳನ್ನು ಖರೀದಿಸಿದ್ದು, ಸರ್ಕಾರ ಈಗಾಗಲೇ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಹಚರರಾದ ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್ ಗೌಡ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರು ಸೋಮಣ್ಣ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿತ್ತು. ನಂತರ ವಿಜಯೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ ನಂತರ ಸುರೇಶ್ ಹಾಗೂ ರವಿಶಂಕರ್ ಅವರೂ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿಚಾರ ತಣ್ಣಗಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT