ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಿವಾಹದ ನೆಪದಲ್ಲಿ ಖಾಸಗಿ ಕ್ಷಣದ ವಿಡಿಯೋ ರೆಕಾರ್ಡ್, ಬ್ಲಾಕ್ ಮೇಲ್; ವ್ಯಕ್ತಿ ವಿರುದ್ಧ ಮಹಿಳೆ ದೂರು!

ವಿವಾಹದ ನೆಪದಲ್ಲಿ ಲೈಂಗಿಕವಾಗಿ ಕಿರುಕುಳ ನೀಡಿದ್ದು, ರಹಸ್ಯವಾಗಿ ತಮ್ಮ ಖಾಸಗಿ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ.

ಬೆಂಗಳೂರು: ನಗರದ ಮಹಿಳೆಯೊಬ್ಬರು ತನ್ನ ಮಾಜಿ ಉದ್ಯೋಗದಾತನ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಮಾಡಿದ್ದಾರೆ. ಆರೋಪಿಯನ್ನು ಶ್ರೀನಿವಾಸ್ ಎಂ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದಂತೆ ಪೊಲೀಸ್ ಪ್ರಕರಣ ದಾಖಲಾಗಿದೆ.

2019 ರಲ್ಲಿ ಪತಿಯಿಂದ ಬೇರ್ಪಟ್ಟ ನಂತರ ಬೆಂಗಳೂರಿನಲ್ಲಿ ಶ್ರೀನಿವಾಸ್ ನಡೆಸುತ್ತಿದ್ದ ಡಿಜಿಟಲ್ ಸೇವಾ ಕೇಂದ್ರದಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದೆ. ಕಾಲಕ್ರಮೇಣ ಇಬ್ಬರೂ ಹತ್ತಿರವಾಗಿದ್ದು,ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ತದನಂತರ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಕಾಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದೇವು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಆರೋಪಿ ವಿವಾಹದ ನೆಪದಲ್ಲಿ ಲೈಂಗಿಕವಾಗಿ ಕಿರುಕುಳ ನೀಡಿದ್ದು, ರಹಸ್ಯವಾಗಿ ತಮ್ಮ ಖಾಸಗಿ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋಗಳನ್ನು ಬಳಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಲು ಶುರು ಮಾಡಿದರು. ಇದರಿಂದ ಹೆದರಿ ಚಿನ್ನಾಭರಣ ಹಾಗೂ 1 ಲಕ್ಷ ರೂಪಾಯಿ ನೀಡಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ.

ಆಕೆ ದೂರು ನೀಡಿದ ನಂತರವೂ ಕಿರುಕುಳ ಮುಂದುವರಿದಿದೆ ಎಂದು ವರದಿಯಾಗಿದೆ. ಆರೋಪಿಯು ಆಕೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಅನ್ನು ರಚಿಸಿದ್ದು, ಆಕೆಯ ಇಮೇಲ್ ಮತ್ತು ಫೋನ್ ನೋಂದಣಿ ವಿವರಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹೆಚ್ಚಿನ ಹಣ ನೀಡದಿದ್ದರೆ ಖಾಸಗಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಡುವುದಾಗಿ ಆಕೆಯ ಸಂಬಂಧಿಕರೊಬ್ಬರಿಗೆ ಬೆದರಿಕೆ ಹಾಕಿದ್ದಾನೆ.

ಆರೋಪಿಯು ಆಕೆಯ ಕುಟುಂಬದವರ ಮನೆಗೆ ಭೇಟಿ ನೀಡಿ ಬೆದರಿಕೆ ಹಾಕಿದ ನಂತರಎರಡನೇ ದೂರು ದಾಖಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT