ಆಗುಂಬೆ ಘಾಟ್ ರಸ್ತೆ 
ರಾಜ್ಯ

ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ

ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಶಿವಮೊಗ್ಗ: ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಇರುವುದಿಲ್ಲ. ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಆಗುಂಬೆ ಘಾಟ್ 169ಎ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಮಲ್ಪೆ ಆಗುಂಬೆ ಹೆದ್ದಾರಿಯ ಭಾಗವಾಗಿರುವ ಆಗುಂಬೆ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಭಾರೀ ವಾಹನಗಳು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗ್ಡೆ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT