ಬಿಬಿಎಂಪಿ  
ರಾಜ್ಯ

ಪರಿಶಿಷ್ಟ ಜಾತಿ ಸಮೀಕ್ಷೆ: ಶೇ.100 ರಷ್ಟು ಪ್ರಗತಿ ಸಾಧಿಸಲು ಮನೆ ಮನೆಗೆ ಸ್ಟಿಕರ್ ಅಂಟಿಸಿ; ಅಧಿಕಾರಿಗಳಿಗೆ ಸುರಾಳ್ಕರ್ ವಿಕಾಸ್ ಸೂಚನೆ

ಸಮೀಕ್ಷೆ ಪೂರ್ಣಗೊಳಿಸಲು ಎಲ್ಲ ಮನೆಗಳಿಗೆ ಸಿಕ್ಕರ್‌ ಅಂಟಿಸಿದರೆ ಸರ್ವೇ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ.

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡುವ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳಿಸಲು ಪಶ್ಚಿಮ ವಲಯದ ವ್ಯಾಪ್ತಿಯ ಪ್ರತಿ ಮನೆಗೆ ಸಿಕ್ಕರ್‌ ಅಂಟಿಸಲು ವಲಯ ಆಯುಕ್ತ ಸುರಾಳ್ಕರ್ ವಿಕಾಸ್ ಕಿಶೋರ್‌ ಅವರು ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದರು.

ಸಮೀಕ್ಷೆ ಕುರಿತು ಶನಿವಾರ ಪಶ್ಚಿಮ ವಲಯ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಮೀಕ್ಷೆ ಪೂರ್ಣಗೊಳಿಸಲು ಎಲ್ಲ ಮನೆಗಳಿಗೆ ಸಿಕ್ಕರ್‌ ಅಂಟಿಸಿದರೆ ಸರ್ವೇ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ. ಈ ನಿಟ್ಟಿನಲ್ಲಿ ಕೂಡಲೇ ಎಲ್ಲ ಮನೆಗಳಿಗೆ ಭೇಟಿ ನೀಡಿ ಸ್ಪಿಕ್ಟರ್‌ಗಳನ್ನು ಅಂಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಕ್ಕರ್‌ ಅಂಟಿಸುವ ವೇಳೆ ಸರ್ವೇ ಆಗಿದೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಅದಕ್ಕಾಗಿ ಎನ್ಎಸ್ಎಸ್, ಎಸಿಸಿ, ನೋಂದಾಯಿತ ಸಂಸ್ಥೆಗಳ ಸಹಯೋಗ ಪಡೆಯಬೇಕು. ಬೆಸ್ಕಾಂ, ಜಲಮಂಡಳಿಯ ದತ್ತಾಂಶ ಆಧಾರದ ಮೇಲೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಬಾಕಿ ಸಮೀಕ್ಷೆ ಮಾಡಬೇಕಿರುವುದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಸಮೀಕ್ಷಾ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ಉದ್ದೇಶದಿಂದ ಜೂನ್ 22ರ ವರೆಗೆ ಅವಧಿ ವಿಸ್ತರಿಸಿ, ನಾಗರೀಕ ಸೇವಾ ಕೇಂದ್ರಗಳಾದ, 'ಕರ್ನಾಟಕ ಒನ್' 'ಬೆಂಗಳೂರು ಒನ್' ಮತ್ತು 'ಗ್ರಾಮ ಒನ್' ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್ ಕಚೇರಿಗಳಲ್ಲಿ ಪ್ರತ್ಯೇ ಕವಾದ ಶಿಬಿರಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನೂ ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ https:// schedulecastesurvey.karnataka. gov.in/selfdeclaration/ ಸಮೀಕ್ಷೆ ಯಲ್ಲಿ ಪಾಲ್ಗೊಳ್ಳಬಹುದಾಗಿದೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT