ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು 208 ಮಂದಿಗೆ ಪಾಸಿಟಿವ್, 103 ಮಂದಿ ಡಿಸ್ಚಾರ್ಜ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 208 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣ ಪತ್ತೆ ಮುಂದುವರೆದಿದ್ದು ಇಂದು ಮತ್ತೆ 208 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 208 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಅಂತೆಯೇ ಇದೇ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದ 103 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ.

ಈ ಪೈಕಿ 692 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ. ರಾಜ್ಯದಲ್ಲಿ ಇಂದು ಒಟ್ಟು 386 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 348 RTPCR ಪರೀಕ್ಷೆ ಮಾಡಲಾಗಿದೆ. 38 RAT ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್‌ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್​ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ'ರ ಯಶೋಗಾಥೆ!

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿಕೆ ಶಿವಕುಮಾರ್ - ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?