ಯುವತಿಗೆ ಕಪಾಳಕ್ಕೆ ಬಾರಿಸಿದ ರ್ಯಾಪಿಡೋ ಸವಾರ 
ರಾಜ್ಯ

ಬೆಂಗಳೂರು: ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಸವಾರ, Video Viral

ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಗಳೂರು: ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಬೈಕ್ ಸವಾರನ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಭರಣ ಅಂಗಡಿಯೊಂದರ ಉದ್ಯೋಗಿಯಾಗಿದ್ದ ಮಹಿಳೆ ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಬೈಕ್ ಸವಾರನ ಅತಿವೇಗದ ಚಾಲನೆ ವಿರುದ್ಧ ಆರೋಪಿಸಿದ ಮಹಿಳೆ ಪ್ರಯಾಣವನ್ನು ಅರ್ಧದಲ್ಲೇ ಕೊನೆಗೊಳಿಸಲು ಆಯ್ಕೆ ಮಾಡಿದ್ದಳು. ಈ ವೇಳೆ ಸವಾರ ಮಹಿಳೆಯನ್ನು ಪ್ರಶ್ನಿಸಿದ್ದು ನಂತರ ವಾಗ್ವಾದ ಶುರುವಾಗಿದೆ. ಮಾತಿಗೆ ಮಾತು ಬೆಳೆದ ಸವಾರ ಮಹಿಳೆಯ ಕಪಾಳಕ್ಕೆ ಹೊಡೆದಿದ್ದು ಆಕೆ ನೆಲದ ಮೇಲೆ ಉರುಳಿ ಬಿದ್ದಿದ್ದಾಳೆ.

ಮಹಿಳೆ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು ಚಾಲಕ ಕನ್ನಡದಲ್ಲಿ ಮಾತನಾಡಿದ್ದು ಪರಿಸ್ಥಿತಿ ಇನ್ನಷ್ಟು ಹದಗೆಡಿಸಿತು. ನಂತರ ಮಹಿಳೆ ಹಣ ಪಾವತಿಸಲು ಜೊತೆ ಕಂಪನಿ ನೀಡಿದ ಹೆಲ್ಮೆಟ್ ಅನ್ನು ಹಿಂತಿರುಗಿಸಲು ನಿರಾಕರಿಸಿದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಇವರಿಬ್ಬರ ಜಗಳವನ್ನು ದಾರಿಹೋಕರೊಬ್ಬರು ಚಿತ್ರೀಕರಿಸಿದ್ದು ನಂತರ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಹಲವು ಜನರು ಕಾಣಿಸಿಕೊಂಡಿದ್ದಾರೆ. ಆದರೆ ಹಲ್ಲೆಯ ಸಮಯದಲ್ಲಿ ಯಾರೂ ಮಧ್ಯಪ್ರವೇಶಿಸಲಿಲ್ಲ.

ಪೊಲೀಸ್ ಮೂಲಗಳು ಹೇಳುವಂತೆ, ಮಹಿಳೆ ಆರಂಭದಲ್ಲಿ ಔಪಚಾರಿಕ ದೂರು ದಾಖಲಿಸಲು ಮುಂದಾಗಲಿಲ್ಲ. ಹೀಗಾಗಿ NCR ದಾಖಲಿಸಲಾಗಿದೆ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ NCR ಅನ್ನು ಔಪಚಾರಿಕ FIR ಆಗಿ ಅಪ್‌ಗ್ರೇಡ್ ಮಾಡುವ ಬಗ್ಗೆ ಯೋಚಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ವಿವರವಾದ ತನಿಖೆ ನಡೆಯುತ್ತಿದೆ.

ಈ ಘಟನೆಯು ಅಪ್ಲಿಕೇಶನ್ ಆಧಾರಿತ ಸಾರಿಗೆ ಸೇವೆಗಳನ್ನು ಬಳಸುವ ಮಹಿಳೆಯರ ಸುರಕ್ಷತೆಯ ಕುರಿತು ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನದ ನೀಡಿದ್ದು ಇಂದಿನಿಂದ ಬೈಕ್ ಟ್ಯಾಕ್ಸಿಗಳು ನಿಷೇಧಿಸಲಾಗಿತ್ತು. ಆದರೂ ಬೈಕ್ ಟ್ಯಾಕ್ಸಿ ಸೇವೆ ಮುಂದೂವರೆದಿದೆ. ಬೈಕ್ ಟ್ಯಾಕ್ಸಿಗಳು ಕಾನೂನುಬದ್ಧವಾಗಿ ವಾಣಿಜ್ಯ ವಾಹನಗಳಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಕೋರ್ಟ್ ನಲ್ಲಿ ವಾದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT