ದಿನೇಶ್ ಗುಂಡೂರಾವ್ 
ರಾಜ್ಯ

ಸಣ್ಣ ವ್ಯಾಪಾರಿಗಳ ಮೇಲೆ ದೌರ್ಜನ್ಯ; ಶೀಘ್ರದಲ್ಲೇ ಬಿಬಿಎಂಪಿ, ಪೊಲೀಸ್, ಆರೋಗ್ಯ ಇಲಾಖೆ ಸಭೆ ಕರೆದು ಕ್ರಮ: ದಿನೇಶ್ ಗುಂಡೂರಾವ್

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ. ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯ.

ಬೆಂಗಳೂರು: ದುಡಿದು ತಿನ್ನುವ ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ದೌರ್ಜನ್ಯ ನಡೆಯುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ರವಿ ಶೆಟ್ಟಿ ಬೈಂದೂರ್ ಸಾರಥ್ಯದಲ್ಲಿ ನಡೆದ “ಶ್ರಮಿಕರ ಸಂವಾದ ಸಭೆ”ಯಲ್ಲಿ ಮಾತನಾಡಿದ ಸಚಿವರು, ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ. ಬೇಕರಿ ಕಾಂಡಿಮೆಂಟ್ಸ್ ಮತ್ತು ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಖಂಡನೀಯ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಬಿಬಿಎಂಪಿ, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಸಭೆ ಕರೆದು, ಕಾಂಡಿಮೆಂಟ್ಸ್, ಬೀಡ ಅಂಗಡಿ ಹಾಗೂ ಸಣ್ಣ ಉದ್ಯಮೆದಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುತ್ತೇವೆ ಎಂದರು.

ಇದಕ್ಕೂ ಮುನ್ನ ಸಂವಾದದಲ್ಲಿ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಎಳೆಎಳೆಯಾಗಿ ಬಿಡಿಸಿಟ್ಟರು. ಬಿಬಿಎಂಪಿ ಅಧಿಕಾರಿಗಳು ಬೇಕರಿಗಳ ಮೇಲೆ ದಾಳಿ ಮಾಡಿ ಗರಿಷ್ಠ 25 ಸಾವಿರ ರೂ. ವರೆಗೆ ದಂಡ ವಿಧಿಸುತ್ತಿದ್ದಾರೆ. ಪುಡಿ ರೌಡಿಗಳ ಉಪಟಳವೂ ಹೆಚ್ಚಾಗಿದೆ. ಪರಿಸರ ಮಾಲೀನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಮ್ಮ ಮೇಲೆ ದರ್ಪ, ದೌರ್ಜನ್ಯ ತೋರುತ್ತಿದ್ದಾರೆ. ಸರ್ಕಾರ ನಮಗೆ ರಕ್ಷಣೆ ನೀಡದಿದ್ದರೆ ನಾವು ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರುಮೆ ಮಾತನಾಡಿ, ನಾನೂ ಕೂಡ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡು ಬೆಳೆದು ಬಂದವನು. ನನಗೆ ಈ ಉದ್ಯಮದಲ್ಲಿ 30 ವರ್ಷಗಳ ಕಹಿ ಅನುಭವವಿದೆ. ಬೇಕರಿ, ಹೋಟೆಲ್ ಗಳು, ಬೀಡಾ ಅಂಗಡಿಗಳನ್ನು ಹೆಚ್ಚಾಗಿ ಕರಾವಳಿ ಭಾಗದವರು ನಡೆಸುತ್ತಿದ್ದಾರೆ. ಈ ಸಮಸ್ಯೆ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶದನಲ್ಲಿ ಪ್ರಸ್ತಾಪಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುತ್ತೇನೆ ಎಂದು ಹೇಳಿದರು.

ಶ್ರಮಿಕರ ನೇರ ಸಂವಾದ” ಕಾರ್ಯಕ್ರಮದಲ್ಲಿ ಸಂತೋಷ ಗುರೂಜಿ, ಹಿರಿಯ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ, ಸಮತಾ ಸೈನಿಕದಳ ವೆಂಕಟಸ್ವಾಮಿ ಏನ್, ಆರ್ ರಮೇಶ್, ಚಾಲಕರ ಸಂಘಟನೆಯಿಂದ ಗಂಡಸಿ ಸದಾನಂದ ಸ್ವಾಮಿ, ಬೆಂಗಳೂರು ಹೋಟೆಲ್ ಸಂಘದ ಗೌ, ಅಧ್ಯಕ್ಷ ಪಿ ಸಿ ರಾವ್, ಮಧುಕರ್ ಶೆಟ್ಟಿ, ಕನ್ನಡ ಪರ ಹೋರಾಟಗಾರಾದ, ನಟರಾಜ್ ಬೊಮ್ಮಸಂದ್ರ ಮಂಚೇಗೌಡ, ಪೂಜಾ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT