ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯ ನಿವಾಸಿಗಳು 
ರಾಜ್ಯ

ಚಾಮುಂಡೇಶ್ವರಿ ದರ್ಶನಕ್ಕೆ 2000 ರೂ ವಿಶೇಷ ಟಿಕೆಟ್: ಸರ್ಕಾರದ ವಿರುದ್ಧ ಸ್ಥಳೀಯ ನಿವಾಸಿಗಳ ಕಿಡಿ, ಪ್ರತಿಭಟನೆ

ಚಾಮುಂಡೇಶ್ವರಿ ದೇವಸ್ಥಾನದ ಸೇವಾ ಶುಲ್ಕಗಳನ್ನು ಏಕಾಏಕಿ 300 ರೂ. ನಿಂದ 550 ರೂ ಗೆ ಏರಿಸಿರುವುದು ಖಂಡನೀಯ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜೂನ್‌ 27ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದೆ, ಇದರ ನಡುವೆ ವಿಶೇಷ ದರ್ಶನ’ಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯ ನಿವಾಸಿಗಳು ಕಿಡಿಕಾರಿದ್ದು, ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟದಲ್ಲಿ ಸರಿಯಾಗಿ ಕುಡಿಯುವ ನೀರೇ ಇಲ್ಲ. 5-6 ದಿನಗಳಿಗೊಮ್ಮೆ ಬೆಟ್ಟಕ್ಕೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಅಲ್ಲಿನ ಸ್ಥಳೀಯ ನಿವಾಸಿಗಳು ಪರದಾಡುತ್ತಿದ್ದಾರೆ. ಬಹಳ ವರ್ಷಗಳ ಹಿಂದೆಯೇ ಆರಂಭವಾದ ಪೈಪ್‌ಲೈನ್ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. ಇದರಿಂದ ಬೆಟ್ಟದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಸರಿಯಾದ ಮೂಲಸೌಕರ್ಯಗಳೇ ಇಲ್ಲ. ಕುಡಿಯುವ ನೀರು, ಶೌಚಗೃಹ, ಸ್ನಾನಗೃಹಗಳಿಲ್ಲ. ಈಗಿರುವ ಒಂದೇ ಶೌಚಗೃಹದಲ್ಲಿ ಮೂತ್ರ, ಮಲ ವಿಸರ್ಜನೆಗೆ 5, 10 ರೂ. ವಸೂಲಿ ಮಾಡಲಾಗುತ್ತಿದೆ. ಇದನ್ನು ಉಚಿತ ಮಾಡಬೇಕು. ಆಷಾಢದಲ್ಲಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವುದರಿಂದ ಕೂಡಲೇ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಚಾಮುಂಡೇಶ್ವರಿ ದೇವಸ್ಥಾನದ ಸೇವಾ ಶುಲ್ಕಗಳನ್ನು ಏಕಾಏಕಿ 300 ರೂ. ನಿಂದ 550 ರೂ.ಗೆ ಏರಿಸಿರುವುದು ಖಂಡನೀಯ. ಭಕ್ತಾದಿಗಳ ಧಾರ್ಮಿಕ ಆಚರಣೆ ಮೇಲೆ ಕಣ್ಣಿಟ್ಟು, ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಹೊರಟಿರುವುದು ದುರಾದೃಷ್ಟಕರ ಸಂಗತಿ.

ಈ ವರ್ಷ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ಮಾಡಿರುವುದು ಖಂಡನೀಯ. ಸಾರ್ವಜನಿಕರಿಂದ ಹಣವನ್ನು ಹಗಲು ದರೋಡೆ ಮಾಡಲು ಹೊರಟಿದೆ. ದೇವರ ದರ್ಶನಕ್ಕೆ ಸರ್ಕಾರ ಇಷ್ಟೊಂದು ದುಬಾರಿ ಟಿಕೆಟ್ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರ ಜನರಿಗೆ ಒಂದು ಕೈಯಲ್ಲಿ ಕೊಟ್ಟು ದೇವರ ಹೆಸರಿನಲ್ಲಿ ಇನ್ನೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ. ಕೂಡಲೇ 2000 ರೂ. ದುಬಾರಿ ಟಿಕೆಟ್ ರದ್ದುಗೊಳಿಸಬೇಕು. ಸೇವಾಶುಲ್ಕವನ್ನು ಯಥಾ ಸ್ಥಿತಿಗೆ ತರಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT