ಸುಮಲತಾ ಅಂಬರೀಷ್ 
ರಾಜ್ಯ

ಕೇವಲ ಅಣೆಕಟ್ಟಲ್ಲ, ನಮ್ಮ ಇತಿಹಾಸ, ಸಂಸ್ಕೃತಿ: KRS ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಸುಮಲತಾ ವಿರೋಧ

ಇದು ಕೇವಲ ಒಂದು ಅಣೆಕಟ್ಟಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

ಮಂಡ್ಯ: KRS ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅವರು ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ.

ಇದು ಕೇವಲ ಒಂದು ಅಣೆಕಟ್ಟಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.

ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸರ್ಕಾರಕ್ಕೆ ಮಾಜಿ ಸಂಸದೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್