ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: KIADB 'ಡಬಲ್ ಪರಿಹಾರ ಹಗರಣ'; ಇಡಿಯಿಂದ 1.8 ಕೋಟಿ ರೂ TDS ಹಣ ಜಪ್ತಿ

ಭೂ ಸ್ವಾಧೀನಕ್ಕಾಗಿ ಪರಿಹಾರದ ವಂಚನೆ ಹಗರಣದಲ್ಲಿ ಧಾರವಾಡದ ನಿವೃತ್ತ ವಿಶೇಷ ಭೂ ಸ್ವಾಧೀನ ಅಧಿಕಾರಿ ವಿ.ಡಿ. ಸಜ್ಜನ್, KIADB ಮತ್ತು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ.

ಬೆಂಗಳೂರು: ಧಾರವಾಡದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB)ಯ 'ಡಬಲ್ ಪರಿಹಾರ ಹಗರಣ'ದಲ್ಲಿ ನಕಲಿ ಪ್ಯಾನ್ ಸಲ್ಲಿಸಿ ಜಮಾ ಮಾಡಲಾದ 1.80 ಕೋಟಿ ರೂ. ಟಿಡಿಎಸ್(TDS) ಹಣವನ್ನು ಜಾರಿ ನಿರ್ದೇಶನಾಯಲ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಭೂ ಸ್ವಾಧೀನಕ್ಕಾಗಿ ಪರಿಹಾರದ ವಂಚನೆ ಹಗರಣದಲ್ಲಿ ಧಾರವಾಡದ ನಿವೃತ್ತ ವಿಶೇಷ ಭೂ ಸ್ವಾಧೀನ ಅಧಿಕಾರಿ ವಿ.ಡಿ. ಸಜ್ಜನ್, KIADB ಮತ್ತು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಕ್ಕೆ ಸಲ್ಲಿಸಿದ ಅರ್ಜಿಗಳ ಮೂಲಕ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯಂತಹ ವಿವರಗಳನ್ನು ನವೀಕರಿಸುವ ಮೂಲಕ ಆರೋಪಿಗಳು ನಕಲಿ ಆಧಾರ್ ಗುರುತುಗಳನ್ನು ರಚಿಸಿದ್ದಾರೆ ಎಂದು ವರದಿ ತಿಳಿಸಿದೆ.

ನಕಲಿ ಪ್ಯಾನ್‌ಗಳನ್ನು ಪಡೆಯಲು ಈ ನಕಲಿ ವಿವರಗಳನ್ನು ಬಳಸಲಾಗುತ್ತಿತ್ತು. ಪ್ಯಾನ್‌ಗಳನ್ನು ಬಳಸಿಕೊಂಡು, ಆರೋಪಿಗಳು ಬ್ಯಾಂಕ್ ಖಾತೆಗಳನ್ನು ತೆರೆದು KIADB ಮುಂದೆ ಎರಡನೇ ಬಾರಿಗೆ ಪರಿಹಾರ ಹಕ್ಕುಗಳನ್ನು ಸಲ್ಲಿಸಿದರು, ಈಗಾಗಲೇ ಪರಿಹಾರ ಪಡೆದ ಅಥವಾ ಮರಣ ಹೊಂದಿದ ಭೂಮಾಲೀಕರನ್ನು ಗುರಿಯಾಗಿರಿಸಿದ್ದರು ಎಂದು ಅದು ಹೇಳಿದೆ.

ನಂತರ ಪರಿಹಾರದ ಮೊತ್ತವನ್ನು ನಕಲಿ ಖಾತೆಗಳಿಗೆ ಜಮಾ ಮಾಡಲಾಯಿತು. ಸುಮಾರು 46 ಕೋಟಿ ರೂ.ಗಳೆಂದು ಅಂದಾಜಿಸಲಾದ ಹಣವನ್ನು ನಗದು ರೂಪದಲ್ಲಿ ಹಿಂಪಡೆಯಲಾಯಿತು. ಹಣ ಹಿಂಪಡೆಯುವಿಕೆಯ ಸಮಯದಲ್ಲಿ, 1961 ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 194N ಅಡಿಯಲ್ಲಿ ಟಿಡಿಎಸ್ ಕಡಿತಗೊಳಿಸಿ ನಕಲಿ ಪ್ಯಾನ್‌ ಕಾರ್ಡ್ ಗಳಿಗೆ ಜಮಾ ಮಾಡಲಾಯಿತು.

ಇಡಿ ಈಗ ಈ ಟಿಡಿಎಸ್ ಮೊತ್ತವನ್ನು "ಅಪರಾಧದ ಆದಾಯ" ಎಂದು ವರ್ಗೀಕರಿಸಿದೆ. ಹಣವನ್ನು ಹಿಂತೆಗೆದುಕೊಂಡ ನಂತರ ಆಧಾರ್ ಡೇಟಾಬೇಸ್‌ನಲ್ಲಿರುವ ಜನಸಂಖ್ಯಾ ವಿವರಗಳನ್ನು ಮೂಲ ಗುರುತಿಗೆ ಬದಲಾಯಿಸಲಾಯಿತು.

ಏನಿದು ಘಟನೆ?

ಕೆಐಎಡಿಬಿ(KIADB)ಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು.

ಸರ್ಕಾರ ಹಾಗೂ ರೈತರ ನಡುವೆ ಕೆಲಸ ಮಾಡುವ ಇಲಾಖೆ ಇದಾಗಿದ್ದು, ರೈತರಿಂದ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಕೈಗಾರಿಕೆಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನೇ ದಂಧೆ ಮಾಡಿಕೊಂಡ ಅಧಿಕಾರಿಗಳು ಹಾಗೂ ಏಜೆಂಟರು ನಿರಂತರವಾಗಿ ಹಣವನ್ನು ಲೂಟಿ ಮಾಡುತ್ತಲೇ ಬಂದಿದ್ದಾರೆ. ಇದೀಗ ಜಾರಿ ನಿರ್ದೇಶನಾಲಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT