ಥಗ್ ಲೈಫ್ ಚಿತ್ರದ ಪೋಸ್ಟರ್ 
ರಾಜ್ಯ

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video

ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಪ್ರವೀಣ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರ ಥಗ್ ಲೈಫ್ ಚಿತ್ರ ಬಿಡುಗಡೆಯನ್ನು ವಿರೋಧಿಸುವುದಿಲ್ಲ ಎಂದು ಕನ್ನಡ ಪರ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಬುಧವಾರ ಹೇಳಿದ್ದಾರೆ.

ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರದ ಬಿಡುಗಡೆಯನ್ನು ನಾವು ವಿರೋಧಿಸುತ್ತಿಲ್ಲ. ಅವರ ಕುರಿತ ವಿವಾದ ಸರಳವಾಗಿತ್ತು.ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳುವ ಮೂಲಕ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ನಂತರ, ಹೈಕೋರ್ಟ್ ನೀಡಿದ ಸಲಹೆಗಳ ಪ್ರಕಾರ ಅವರು ಕ್ಷಮೆಯಾಚಿಸಬೇಕಾಗಿತ್ತು.

ಆದರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈಗ, ಸುಪ್ರೀಂ ಕೋರ್ಟ್ ಆದೇಶ ನೀಡಿದೆ, ಆದ್ದರಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ಪೊಲೀಸರನ್ನು ನಿಯೋಜಿಸುವ ಮೂಲಕ ಕ್ರಿಯಾಶೀಲತೆಯನ್ನು ತಡೆಯುವುದು ಸಂವಿಧಾನ ಮತ್ತು ನೆಲದ ಕಾನೂನಿಗೆ ವಿರುದ್ಧವಾಗಿದೆ ಎಂದು ಪ್ರವೀಣ್ ಶೆಟ್ಟಿ ಎಎನ್ ಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡುತ್ತಾ ಹೇಳಿದರು.

ಇಂದು ಮುಂಜಾನೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಚಿತ್ರದ ಪ್ರದರ್ಶನವನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವಂತೆ ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದರು.

ಕನ್ನಡ ಭಾಷೆಯ ಬಗ್ಗೆ ಹೇಳಿಕೆಗಳು ದೊಡ್ಡ ವಿವಾದವನ್ನು ಹುಟ್ಟುಹಾಕಿದ ನಂತರ, ಕನ್ನಡ ಕಾರ್ಯಕರ್ತರು ಚಿತ್ರದ ಪ್ರದರ್ಶನವನ್ನು ವಿರೋಧಿಸಿದ್ದರು. ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ 'ಥಗ್ ಲೈಫ್' ಬಿಡುಗಡೆಗೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ವಿವರಣೆಯನ್ನು ಕರ್ನಾಟಕ ಸರ್ಕಾರಕ್ಕೆ ಕೇಳಿದೆ.

ಕಮಲ್ ಹಾಸನ್ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಾವೆಲ್ಲರೂ ಗೌರವಿಸಬೇಕು. ಕನ್ನಡ ಪರ ಸಂಘಟನೆಗಳು ಮಿತಿಗಳನ್ನು ಮೀರಬಾರದು ಮತ್ತು ಶಾಂತಿಯುತವಾಗಿರಬೇಕು ಎಂದು ನಾನು ಮನವಿ ಮಾಡುತ್ತೇನೆ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ನಮ್ಮ ರಾಜ್ಯವು ಶಾಂತಿಪ್ರಿಯ ರಾಜ್ಯವಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT