ಥಗ್ ಲೈಫ್ ಚಿತ್ರದ ಪೋಸ್ಟರ್ 
ರಾಜ್ಯ

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video

ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಪ್ರವೀಣ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರ ಥಗ್ ಲೈಫ್ ಚಿತ್ರ ಬಿಡುಗಡೆಯನ್ನು ವಿರೋಧಿಸುವುದಿಲ್ಲ ಎಂದು ಕನ್ನಡ ಪರ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಬುಧವಾರ ಹೇಳಿದ್ದಾರೆ.

ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರದ ಬಿಡುಗಡೆಯನ್ನು ನಾವು ವಿರೋಧಿಸುತ್ತಿಲ್ಲ. ಅವರ ಕುರಿತ ವಿವಾದ ಸರಳವಾಗಿತ್ತು.ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳುವ ಮೂಲಕ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ನಂತರ, ಹೈಕೋರ್ಟ್ ನೀಡಿದ ಸಲಹೆಗಳ ಪ್ರಕಾರ ಅವರು ಕ್ಷಮೆಯಾಚಿಸಬೇಕಾಗಿತ್ತು.

ಆದರೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈಗ, ಸುಪ್ರೀಂ ಕೋರ್ಟ್ ಆದೇಶ ನೀಡಿದೆ, ಆದ್ದರಿಂದ ನಾವು ಅದನ್ನು ಸ್ವೀಕರಿಸುತ್ತೇವೆ. ಪೊಲೀಸರನ್ನು ನಿಯೋಜಿಸುವ ಮೂಲಕ ಕ್ರಿಯಾಶೀಲತೆಯನ್ನು ತಡೆಯುವುದು ಸಂವಿಧಾನ ಮತ್ತು ನೆಲದ ಕಾನೂನಿಗೆ ವಿರುದ್ಧವಾಗಿದೆ ಎಂದು ಪ್ರವೀಣ್ ಶೆಟ್ಟಿ ಎಎನ್ ಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡುತ್ತಾ ಹೇಳಿದರು.

ಇಂದು ಮುಂಜಾನೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಚಿತ್ರದ ಪ್ರದರ್ಶನವನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವಂತೆ ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದರು.

ಕನ್ನಡ ಭಾಷೆಯ ಬಗ್ಗೆ ಹೇಳಿಕೆಗಳು ದೊಡ್ಡ ವಿವಾದವನ್ನು ಹುಟ್ಟುಹಾಕಿದ ನಂತರ, ಕನ್ನಡ ಕಾರ್ಯಕರ್ತರು ಚಿತ್ರದ ಪ್ರದರ್ಶನವನ್ನು ವಿರೋಧಿಸಿದ್ದರು. ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ 'ಥಗ್ ಲೈಫ್' ಬಿಡುಗಡೆಗೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ವಿವರಣೆಯನ್ನು ಕರ್ನಾಟಕ ಸರ್ಕಾರಕ್ಕೆ ಕೇಳಿದೆ.

ಕಮಲ್ ಹಾಸನ್ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ನಾವೆಲ್ಲರೂ ಗೌರವಿಸಬೇಕು. ಕನ್ನಡ ಪರ ಸಂಘಟನೆಗಳು ಮಿತಿಗಳನ್ನು ಮೀರಬಾರದು ಮತ್ತು ಶಾಂತಿಯುತವಾಗಿರಬೇಕು ಎಂದು ನಾನು ಮನವಿ ಮಾಡುತ್ತೇನೆ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ನಮ್ಮ ರಾಜ್ಯವು ಶಾಂತಿಪ್ರಿಯ ರಾಜ್ಯವಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT