ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಖಾಸಗಿ ವಲಯದ ನೌಕರರಿಗೆ 10 ಗಂಟೆ ಕೆಲಸದ ಪ್ರಸ್ತಾವನೆಗೆ ವ್ಯಾಪಕ ಆಕ್ರೋಶ

ಪ್ರಸ್ತಾವಿತ ತಿದ್ದುಪಡಿಯು ಕಂಪನಿಗಳು ಅಸ್ತಿತ್ವದಲ್ಲಿರುವ ಮೂರು-ಶಿಫ್ಟ್ ವ್ಯವಸ್ಥೆಯ ಬದಲಿಗೆ ಎರಡು-ಶಿಫ್ಟ್ ವ್ಯವಸ್ಥೆಗೆ ಅನುವು ಮಾಡಿಕೊಡುತ್ತದೆ ಎಂದು ನೌಕರರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಸದ್ಯ ರಾಜ್ಯದಲ್ಲಿ ಖಾಸಗಿ ನೌಕರರಿಗೆ ಪ್ರತಿನಿತ್ಯ 8 ರಿಂದ 9 ಗಂಟೆಗಳ ಕೆಲಸದ ಅವಧಿಯನ್ನು ಫಿಕ್ಸ್ ಮಾಡಲಾಗಿದೆ. ಆದ್ರೆ, ಈ ಕೆಲಸದ ಅವಧಿಯನ್ನು ವಿಸ್ತರಣೆ ಮಾಡಲು ಚಿಂತನೆ ನಡೆದಿದ್ದು, 8 ರಿಂದ 10 ಗಂಟೆಗೆ ಹೆಚ್ಚಿಸಲು ಚರ್ಚೆ ನಡೆದಿದೆ.

ಖಾಸಗಿ ಸಂಸ್ಥೆಗಳ ಕೆಲಸದ ಸಮಯವನ್ನು ದಿನಕ್ಕೆ ಒಂಬತ್ತು ಗಂಟೆಗಳಿಂದ 10 ಗಂಟೆಗಳಿಗೆ ಹೆಚ್ಚಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಐಟಿ/ಐಟಿಇಎಸ್ ನೌಕರರ ಸಂಘ ಸೇರಿದಂತೆ ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅವರು ಪ್ರತಿಭಟನೆಗಳನ್ನು ನಡೆಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1961 ಕ್ಕೆ ತಿದ್ದುಪಡಿ ತರುವ ಪ್ರಸ್ತಾವನೆ ಇರುವುದರಿಂದ ಕಾರ್ಮಿಕ ಕಾರ್ಯದರ್ಶಿ ರೋಹಿಣಿ ಸಿಂಧೂರಿ ನೇತೃತ್ವದ ರಾಜ್ಯ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಂವಹನ ನಡೆಸಿ, ಕೆಲಸದ ಸಮಯವನ್ನು 10 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ.

ಪ್ರಸ್ತಾವಿತ ತಿದ್ದುಪಡಿಯು ಕಂಪನಿಗಳು ಅಸ್ತಿತ್ವದಲ್ಲಿರುವ ಮೂರು-ಶಿಫ್ಟ್ ವ್ಯವಸ್ಥೆಯ ಬದಲಿಗೆ ಎರಡು-ಶಿಫ್ಟ್ ವ್ಯವಸ್ಥೆಗೆ ಅನುವು ಮಾಡಿಕೊಡುತ್ತದೆ ಎಂದು ನೌಕರರು ಆತಂಕ ವ್ಯಕ್ತಪಡಿಸಿದ್ದಾರೆ. "ಇದರರ್ಥ, ಮೂರನೇ ಒಂದು ಭಾಗದಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಭಾರತದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಶೇ. 90 ರಷ್ಟು ಕಾರ್ಪೊರೇಟ್ ಉದ್ಯೋಗಿಗಳು ಆತಂಕದಿಂದ ಬಳಲುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಒಕ್ಕೂಟದ (ಕೆಐಟಿಯು) ಪ್ರಧಾನ ಕಾರ್ಯದರ್ಶಿ ಸುಹಾಸ್ ಅಡಿಗ ತಿಳಿಸಿದ್ದಾರೆ. ಕೆಲಸದ ಒತ್ತಡದಿಂದಾಗಿ, ಕಾರ್ಪೊರೇಟ್ ವಲಯದಲ್ಲಿ ಆತ್ಮಹತ್ಯೆ ಮತ್ತು ಸಾವು ಸಂಭವಿಸಿವೆ ಎಂದು ಹೇಳಿದ್ದಾರೆ.

ಐಟಿ/ಐಟಿಇಎಸ್ ಸಂಘದ ಪ್ರಕಟಣೆಯ ಪ್ರಕಾರ, ಪ್ರಸ್ತಾವಿತ ತಿದ್ದುಪಡಿಯು ಕರ್ನಾಟಕ ಸರ್ಕಾರವು ಕಾರ್ಮಿಕರನ್ನು ಬದುಕಲು ವೈಯಕ್ತಿಕ ಮತ್ತು ಸಾಮಾಜಿಕ ಜೀವನದ ಅಗತ್ಯವಿರುವ ಮನುಷ್ಯರಾಗಿ ಗುರುತಿಸಲು ಇಷ್ಟವಿಲ್ಲ ಎಂದು ತೋರಿಸುತ್ತದೆ. "ಬದಲಾಗಿ, ಅದು ಸೇವೆ ಸಲ್ಲಿಸುವ ಕಾರ್ಪೊರೇಟ್‌ಗಳ ಲಾಭವನ್ನು ಹೆಚ್ಚಿಸಲು ಅವರನ್ನು ಕೇವಲ ಯಂತ್ರಗಳಾಗಿ ನೋಡುತ್ತದೆ" ಎಂದು ಅದು ಹೇಳಿದೆ.

ಈ ಕ್ರಮವನ್ನು ಮರುಪರಿಶೀಲಿಸುವಂತೆ ಕೆಐಟಿಯು ಸರ್ಕಾರವನ್ನು ಒತ್ತಾಯಿಸಿತು. ತಿದ್ದುಪಡಿಯನ್ನು ಮುಂದುವರಿಸುವ ಯಾವುದೇ ಪ್ರಯತ್ನವನ್ನು ಕರ್ನಾಟಕದ ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ನೇರ ಸವಾಲಾಗಿ ನೋಡಲಾಗುತ್ತದೆ. ನಮ್ಮ ಮೇಲೆ ಆಧುನಿಕ ಗುಲಾಮಗಿರಿಯನ್ನು ಹೇರುವ ಈ ಅಮಾನವೀಯ ಪ್ರಯತ್ನ"ವನ್ನು ವಿರೋಧಿಸಲು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳು ಒಗ್ಗೂಡಿ ಒಟ್ಟಾಗಿ ನಿಲ್ಲಬೇಕೆಂದು ಕೆಐಟಿಯು ಕರೆ ನೀಡಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT