ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: 12 ಸರ್ಕಾರಿ ಶಾಲೆಗಳಿಗೆ ಹೈಟೆಕ್ ವಿಜ್ಞಾನ ಪ್ರಯೋಗಾಲಯ!

ಇದು ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಕ್ರಿಯಾ ಯೋಜನೆಯ ಭಾಗವಾಗಿದೆ. ಇದರಡಿ ಕರ್ನಾಟಕದ 77 ಶಾಲೆಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ರಾಯಚೂರು: ಗ್ರಾಮೀಣ ಪ್ರದೇಶದಲ್ಲಿ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಯ 12 ಸರ್ಕಾರಿ ಶಾಲೆಗಳಿಗೆ ರಾಜ್ಯ ಮತ್ತು ಎನ್ ಸಿಇಆರ್ ಟಿ ಪಠ್ಯಕ್ರಮದ ಜೊತೆಗೆ ಪ್ರಯೋಗಗಳನ್ನು ಮತ್ತು ಕ್ಯುರೇಟೆಡ್ ವಿಜ್ಞಾನ ಕೋರ್ಸ್ ನಡೆಸಲು ಸುಸಜ್ಜಿತ ವಿಜ್ಞಾನ ಲ್ಯಾಬ್ ಗಳನ್ನು ಒದಗಿಸಲಾಗುತ್ತಿದೆ.

ಇದು ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಕ್ರಿಯಾ ಯೋಜನೆಯ ಭಾಗವಾಗಿದೆ. ಇದರಡಿ ಕರ್ನಾಟಕದ 77 ಶಾಲೆಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ಕ್ರಿಯಾ ಯೋಜನೆ ಈಗ 10 ನೇ ವರ್ಷದಲ್ಲಿದೆ. 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹು ವರ್ಷಗಳ ಕಾರ್ಯಕ್ರಮವಾಗಿ ವಿಶೇಷವಾಗಿ ಸರ್ಕಾರಿ ಮತ್ತು ಗ್ರಾಮೀಣ ಶಾಲೆಗಳಲ್ಲಿ ವಿಜ್ಞಾನದ ಅನುಭವದ ಕಲಿಕೆಯ ಪರಿಣಾಮವನ್ನು ಅರ್ಥಮಾಡಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ.

ಶಿಕ್ಷಕರಿಗೆ ನಿರಂತರ ಶೈಕ್ಷಣಿಕ ಮಾರ್ಗದರ್ಶನದೊಂದಿಗೆ ರಚನಾತ್ಮಕ ಶಿಕ್ಷಕರ ಸಬಲೀಕರಣ ಕಾರ್ಯಕ್ರಮವನ್ನು (TEP) ಒಳಗೊಂಡಿದೆ ಎಂದು ಗುರುವಾರ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಸ್‌ಬಿಐ ಫೌಂಡೇಶನ್‌ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಹಯೋಗ ಕುರಿತು ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಪ್ರಕಾಶ್ ಮಾತನಾಡಿ, ಗ್ರಾಮೀಣ ಭಾರತದಲ್ಲಿ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಗುಣಮಟ್ಟದ ವೈಜ್ಞಾನಿಕ ಶಿಕ್ಷಣ ಮತ್ತು ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ನಾವು ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಹೆಚ್ಚು ಪ್ರಾಯೋಗಿಕವಾಗಿ ತಿಳಿಯಲು ಅನುವು ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT