ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರು: 12 ಸರ್ಕಾರಿ ಶಾಲೆಗಳಿಗೆ ಹೈಟೆಕ್ ವಿಜ್ಞಾನ ಪ್ರಯೋಗಾಲಯ!

ಇದು ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಕ್ರಿಯಾ ಯೋಜನೆಯ ಭಾಗವಾಗಿದೆ. ಇದರಡಿ ಕರ್ನಾಟಕದ 77 ಶಾಲೆಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ರಾಯಚೂರು: ಗ್ರಾಮೀಣ ಪ್ರದೇಶದಲ್ಲಿ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಯ 12 ಸರ್ಕಾರಿ ಶಾಲೆಗಳಿಗೆ ರಾಜ್ಯ ಮತ್ತು ಎನ್ ಸಿಇಆರ್ ಟಿ ಪಠ್ಯಕ್ರಮದ ಜೊತೆಗೆ ಪ್ರಯೋಗಗಳನ್ನು ಮತ್ತು ಕ್ಯುರೇಟೆಡ್ ವಿಜ್ಞಾನ ಕೋರ್ಸ್ ನಡೆಸಲು ಸುಸಜ್ಜಿತ ವಿಜ್ಞಾನ ಲ್ಯಾಬ್ ಗಳನ್ನು ಒದಗಿಸಲಾಗುತ್ತಿದೆ.

ಇದು ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯ ಕ್ರಿಯಾ ಯೋಜನೆಯ ಭಾಗವಾಗಿದೆ. ಇದರಡಿ ಕರ್ನಾಟಕದ 77 ಶಾಲೆಗಳಲ್ಲಿ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ಕ್ರಿಯಾ ಯೋಜನೆ ಈಗ 10 ನೇ ವರ್ಷದಲ್ಲಿದೆ. 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹು ವರ್ಷಗಳ ಕಾರ್ಯಕ್ರಮವಾಗಿ ವಿಶೇಷವಾಗಿ ಸರ್ಕಾರಿ ಮತ್ತು ಗ್ರಾಮೀಣ ಶಾಲೆಗಳಲ್ಲಿ ವಿಜ್ಞಾನದ ಅನುಭವದ ಕಲಿಕೆಯ ಪರಿಣಾಮವನ್ನು ಅರ್ಥಮಾಡಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ.

ಶಿಕ್ಷಕರಿಗೆ ನಿರಂತರ ಶೈಕ್ಷಣಿಕ ಮಾರ್ಗದರ್ಶನದೊಂದಿಗೆ ರಚನಾತ್ಮಕ ಶಿಕ್ಷಕರ ಸಬಲೀಕರಣ ಕಾರ್ಯಕ್ರಮವನ್ನು (TEP) ಒಳಗೊಂಡಿದೆ ಎಂದು ಗುರುವಾರ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎಸ್‌ಬಿಐ ಫೌಂಡೇಶನ್‌ ಸಹಯೋಗದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಹಯೋಗ ಕುರಿತು ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಪ್ರಕಾಶ್ ಮಾತನಾಡಿ, ಗ್ರಾಮೀಣ ಭಾರತದಲ್ಲಿ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಗುಣಮಟ್ಟದ ವೈಜ್ಞಾನಿಕ ಶಿಕ್ಷಣ ಮತ್ತು ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ನಾವು ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಹೆಚ್ಚು ಪ್ರಾಯೋಗಿಕವಾಗಿ ತಿಳಿಯಲು ಅನುವು ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ