ಡಿಕೆ.ಶಿವಕುಮಾರ್  
ರಾಜ್ಯ

ಬೆಂಗಳೂರಿಗರ ಮನೆ ಬಾಗಿಲಿಗೇ ಇ-ಖಾತಾ ವಿತರಣೆ: ಜುಲೈ 1ರಿಂದ ಆಂದೋಲನ ಆರಂಭ

ಇ-ಖಾತಾ ವಿತರಣೆ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 1 ರಿಂದ 25,000 ಇ-ಖಾತಾಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸಲಾಗುವುದು.

ಬೆಂಗಳೂರು: ರಾಜ್ಯ ಸರ್ಕಾರವು ಭರವಸೆ ನೀಡಿದಂತೆ ಆಸ್ತಿ ಮಾಲೀಕರಿಗೆ ಅವರ ಮನೆ ಬಾಗಿಲಿಗೆ ಇ-ಖಾತಾಗಳನ್ನು ತಲುಪಿಸಲಿದೆ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ-ಖಾತಾ ವಿತರಣೆ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 1 ರಿಂದ 25,000 ಇ-ಖಾತಾಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಆಸ್ತಿಗಳ ಇ - ಖಾತಾ ದಾಖಲೆ ವಿತರಣೆ ಆಂದೋಲನ ನಡೆಸಲಾಗುವುದು. 'ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿದ್ದು, ಈ ಪೈಕಿ 5 ಲಕ್ಷ ಆಸ್ತಿಗಳ ಮಾಲೀಕರಷ್ಟೇ ಅಂತಿಮ ಇ-ಖಾತಾಗೆ ಅರ್ಜಿ ಸಲ್ಲಿಸಿದ್ದಾರೆ. ಆಸ್ತಿ ಮಾಲೀಕರು ಜಾಗೃತರಾಗಿ ದಾಖಲೆಗಳನ್ನು ಒದಗಿಸಿ ಇ-ಖಾತಾ ಪಡೆದುಕೊಳ್ಳಬೇಕು. ಒಂದು ತಿಂಗಳ ಕಾಲ ಇ-ಖಾತಾ ವಿತರಣೆ ಆಂದೋಲನ ಹಮ್ಮಿಕೊಳ್ಳಲಾಗುವುದು. ಈ ಕುರಿತು ಮನೆ ಮನೆ ಪ್ರಚಾರ ಹಾಗೂ ಜಾಹೀರಾತಿನ ಮೂಲಕ ಪ್ರಚಾರ ಮಾಡಲಾಗುವುದು ಎಂದು ತಿಳಿಸಿದರು.

ಬಿ -ಖಾತಾ ಆಸ್ತಿಗಳಿಗೆ 'ಎ' ಖಾತೆ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಕಾನೂನು ಆಯಾಮಗಳ ಬಗ್ಗೆ ಪರಾಮರ್ಶಿಸಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದರು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆಗಳನ್ನು ರಚಿಸಬೇಕೆಂಬುದರ ಕುರಿತು ಕಾಂಗ್ರೆಸ್‌ ಪಕ್ಷದ ಎಲ್ಲ ಶಾಸಕರೊಂದಿಗೆ ಚರ್ಚಿಸಲಾಗಿದೆ. ಇನ್ನು ಪ್ರತಿಪಕ್ಷ ನಾಯಕರೊಂದಿಗೆ ಚರ್ಚಿಸುವುದು ಬಾಕಿ ಇದೆ. ಅವರನ್ನು ವಿಶ್ವಾಸಕ್ಕೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರದಲ್ಲಿ ತ್ಯಾಜ್ಯ ನಿರ್ವಹಣೆಗೆ ವಿಚಾರ ಕುರಿತು ಕುರಿತು ಮಾತನಾಡಿ, ಸ್ವಚ್ಛ ಬೆಂಗಳೂರು ಉಪಕ್ರಮದ ಅಡಿಯಲ್ಲಿ, ಬಿಬಿಎಂಪಿ ಕಸವನ್ನು ತೆರವುಗೊಳಿಸಲು ಸಹಾಯ ಮಾಡಲು ಸಹಾಯವಾಣಿಯನ್ನು ಸ್ಥಾಪಿಸಿದೆ.

ಜನರು ಪಾದಚಾರಿ ಮಾರ್ಗಗಳು ಅಥವಾ ಇತರ ಸ್ಥಳಗಳಲ್ಲಿ ಸುರಿಯಲಾದ ಕಸದ ಫೋಟೋಗಳನ್ನು ತೆಗೆದು ಈ ಸಂಖ್ಯೆಗೆ ಕಳುಹಿಸಬಹುದು. ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಸ್ತೆ ಗುಂಡಿ ವಿಚಾರ ಕುರಿತು ಮಾತನಾಡಿ, ಶಾಸಕರಿಗೆ ಹಣವನ್ನು ಮಂಜೂರು ಮಾಡಲಾಗಿದೆ, ನಗರದಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದೆ. ಅನೇಕ ಕಡೆಗಳಲ್ಲಿ ಕಾಮಗಾರಿ ಗುಣಮಟ್ಟವನ್ನು ನಾನು ತಪಾಸಣೆ ಮಾಡಿದ್ದೇನೆ. ಕೆಲವು ಕಡೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT