ಮಂಚನಬೆಲೆ ಡ್ಯಾಂ  
ರಾಜ್ಯ

ಬೆಂಗಳೂರು: ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಡಿಪ್ಲೊಮಾ ವಿದ್ಯಾರ್ಥಿ ದಾರುಣ ಸಾವು

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಡಿಪ್ಲೊಮಾ ವಿದ್ಯಾರ್ಥಿ ಮಂಚನಬೆಲೆ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮುರುಗೇಶಪಾಳ್ಯದ ನಿವಾಸಿ, ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಿಕಾಸ್ (19) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ ಮೃತ ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.

ನೀರಿನಲ್ಲಿ ಕೆಲವೇ ನಿಮಿಷಗಳಲ್ಲಿ ವಿಕಾಸ್ ಆಳಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಜಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಸುಮಾರು 6 ಗಂಟೆಗಳ ಹುಡುಕಾಟದ ಬಳಿಕ ವಿಕಾಸ್ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹವ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT