ಸಿಎಂ ಸಿದ್ದರಾಮಯ್ಯ  ಸಾಂದರ್ಭಿಕ ಚಿತ್ರ
ರಾಜ್ಯ

ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ. ರಾಜ್ಯ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ ಅವರಿಗೆ ಮೀಸಲಾತಿ ಹೆಚ್ಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ. ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ. ಚುನಾವಣೆಯಲ್ಲಿ ಗೆದ್ದು ಬರುವಾಗ 'ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್ದ ಕಾಂಗ್ರೆಸ್ಸಿಗರು “ನಮ್ಮದೇನಿದ್ದರೂ ಮುಸ್ಲಿಂ ಸಮುದಾಯದ ಉತ್ತೇಜನದ ಆಡಳಿತ ಎನ್ನುವುದನ್ನೀಗ ಪ್ರತಿಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಎಂದೂ ಇಂತಹ ತಾರತಮ್ಯಕ್ಕೆ ಅವಕಾಶ ಕೊಡಲಿಲ್ಲ, ಕರ್ನಾಟಕದಲ್ಲಿ ‘ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲಿನ’ಆಡಳಿತ ನೀಡಿದೆ. ಕೇಂದ್ರದ ಹೆಮ್ಮೆಯ ಮೋದಿ ಜೀ ಅವರ ಸರ್ಕಾರ ಇಂದಿಗೂ ಕೂಡ ವರ್ಗ ಬೇಧಕ್ಕೆ ಅವಕಾಶ ನೀಡದಂತೆ ಎಲ್ಲರನ್ನೂ ಒಳಗೊಂಡ ಯೋಜನೆಗಳನ್ನು ರೂಪಿಸಿದೆ, ಜಾರಿಗೊಳಿಸುತ್ತಿದೆ, ಆದರೆ ಕರ್ನಾಟಕದಲ್ಲಿ ಏಕೆ ಹೀಗೆ ?ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂದು ಸಂಪುಟ ತೆಗೆದುಕೊಂಡಿರುವ ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಯ ಹೆಚ್ಚಳವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದಿದ್ದಾರೆ.

ನಿರಂತರ ವೈಫಲ್ಯಗಳು, ಮೇಲಿಂದ ಮೇಲೆ ಹೊರ ಬರುತ್ತಿರುವ ಹಗರಣಗಳು, ಭ್ರಷ್ಟಾಚಾರಗಳು ಹಾಗೂ ಹೊಣೆಗೇಡಿತನದ ಆಡಳಿತದ ಪರಿಣಾಮ ಕ್ರಿಕೆಟ್ ಕಾಲ್ತುಳಿತದಲ್ಲಿ ಜನರು ಸಾವು,ನೋವು ಅನುಭವಿಸಿದ ರಾಜ್ಯ ಕಂಡ ಬಹುದೊಡ್ಡ ದುರಂತದ ಪ್ರಕರಣದಿಂದ ಜನರ ದೃಷ್ಟಿ ಬೇರೆಡೆ ಸೆಳೆಯಲು ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ. ಇದನ್ನು ಸಹಿಸಿಕೊಂಡು ಕೂರುವ ಪ್ರಶ್ನೆಯೇ ಇಲ್ಲ, ಭಾರತೀಯ ಜನತಾ ಪಾರ್ಟಿಯು ಜನಾಕ್ರೋಶವನ್ನು ಬೆಂಬಲಿಸಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT