ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೇಂದ್ರದ ಮಾರ್ಗಸೂಚಿಯಂತೆ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇದು ಅಸಂವಿಧಾನಿಕವಾಗಿದ್ದರೆ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಇದನ್ನು ಅನುಸರಿಸಬೇಕು ಎಂದು ಏಕೆ ಹೇಳಿದೆ? ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಕೇಂದ್ರ ಯೋಜನೆಗಳ ಅಡಿಯಲ್ಲಿ ಇದನ್ನು ಏಕೆ ಜಾರಿಗೆ ತರಲಾಗುತ್ತಿದೆ?" ಎಂದು ಸಿಎಂ ಪ್ರಶ್ನಿಸಿದ್ದಾರೆ.

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಬಗ್ಗೆ ವಿರೋಧ ಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಈ ನಿರ್ಧಾರ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಿರುಗೇಟು ನೀಡಿದ್ದಾರೆ.

ಕೇಂದ್ರದ ನಿರ್ದೇಶನ

"ಇದು ಪ್ರಧಾನ ಮಂತ್ರಿಯವರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ(2019)ವನ್ನು ಆಧರಿಸಿದೆ. ಇದು ಎಲ್ಲಾ ಕೇಂದ್ರ ಮತ್ತು ರಾಜ್ಯ ಅನುಷ್ಠಾನ ಸಂಸ್ಥೆಗಳು ಸಾಧ್ಯವಾದಲ್ಲೆಲ್ಲಾ ಅಲ್ಪಸಂಖ್ಯಾತರಿಗೆ ಭೌತಿಕ ಮತ್ತು ಆರ್ಥಿಕ ಗುರಿಗಳಲ್ಲಿ ಶೇ. 15 ರಷ್ಟು ಮೀಸಲಿಡಬೇಕೆಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ನಿರ್ದೇಶಿಸುತ್ತದೆ. ಈ ಮಾರ್ಗಸೂಚಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಹೊರಡಿಸಿದೆ ಮತ್ತು ಹಲವು ವರ್ಷಗಳಿಂದ ಜಾರಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದು ಅಸಂವಿಧಾನಿಕ ಅಥವಾ ಸಮಾಧಾನಕರವಾಗಿದ್ದರೆ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಇದನ್ನು ಅನುಸರಿಸಬೇಕು ಎಂದು ಏಕೆ ಹೇಳಿದೆ? ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಕೇಂದ್ರ ಯೋಜನೆಗಳ ಅಡಿಯಲ್ಲಿ ಇದನ್ನು ಏಕೆ ಜಾರಿಗೆ ತರಲಾಗುತ್ತಿದೆ?" ಎಂದು ಸಿಎಂ ಪ್ರಶ್ನಿಸಿದ್ದಾರೆ.

ಬಿಜೆಪಿಯ ವಿರೋಧ "ಬೂಟಾಟಿಕೆ ಮತ್ತು ರಾಜಕೀಯ ಪ್ರೇರಿತ" ಎಂದು ಟೀಕಿಸಿದ ಸಿಎಂ, ಹೊಸ ಕೋಟಾವು ಮೀಸಲಾತಿಯಿಲ್ಲದ ವರ್ಗದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಬಿಜೆಪಿ ಹೇಳಿಕೊಂಡಂತೆ ಯಾವುದೇ ರೀತಿಯಲ್ಲಿ ಎಸ್‌ಸಿ, ಎಸ್‌ಟಿ ಅಥವಾ ಒಬಿಸಿ ಮೀಸಲಾತಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

"ಈ ನಿರ್ಧಾರವು ಕಾನೂನುಬದ್ಧವಾಗಿದೆ ಮತ್ತು ಸಂಪೂರ್ಣ ಪರಿಶೀಲನೆಯ ನಂತರ ಕಾನೂನು ಇಲಾಖೆಯಿಂದ ಅನುಮೋದನೆ ಪಡೆದಿದೆ" ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಮ್ಮ ಈ ನಿರ್ಧಾರವು ರಾಜ್ಯಾದ್ಯಂತ ಕೋಟಾವನ್ನು ಸಂಪೂರ್ಣವಾಗಿ ಹೆಚ್ಚಿಸಲು ಅವಕಾಶ ನೀಡುವುದಿಲ್ಲ. ಅಲ್ಪಸಂಖ್ಯಾತ ಜನಸಂಖ್ಯೆಯು ಶೇ. 10 ಕ್ಕಿಂತ ಕಡಿಮೆ ಇರುವ ಅನೇಕ ಪಂಚಾಯತ್‌ಗಳಲ್ಲಿ ಈಗಿರುವ ಶೇ. 10 ರಷ್ಟು ಮೀಸಲಾತಿಯನ್ನು ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಹೆಚ್ಚಿನ ಜನಸಂಖ್ಯೆ ಇರುವ ಪಂಚಾಯತ್ ಗಳಲ್ಲಿ ಮರು ಹಂಚಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಇದು ಶೇ. 15ರ ಮಿತಿಗೆ ಒಳಪಟ್ಟಿರುತ್ತದೆ. ಇದು ಮೀಸಲಾತಿಯಿಲ್ಲದ ವರ್ಗದೊಳಗಿನ ಆಡಳಿತಾತ್ಮಕ ಹೊಂದಾಣಿಕೆಯಾಗಿದೆ" ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel