ಸಿಎಂ ಸಿದ್ದರಾಮಯ್ಯ  
ರಾಜ್ಯ

ಭಾರತ ಇರಾನ್‌ ಪರ ನಿಲ್ಲಬೇಕು: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಇರಾನ್ ಮೇಲೆ ಇಸ್ರೇಲ್ ನಡೆಸಿದ ಅಪಾಯಕಾರಿ ದಾಳಿ ಕಾನೂನುಬಾಹಿರ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಬೆಂಗಳೂರು: ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ಭಾರತ ಇರಾನ್‌ ಪರ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗಾಜಾ ಮತ್ತು ಇರಾನ್‌ನಲ್ಲಿ ಇಸ್ರೇಲ್ ನಡೆಸಿದ ದಾಳಿ ಬಗ್ಗೆ ಭಾರತ ವಹಿಸಿರುವ ಮೌನವನ್ನು "ಕೇವಲ ಧ್ವನಿಯ ನಷ್ಟವಲ್ಲ, ಮೌಲ್ಯಗಳ ಶರಣಾಗತಿ" ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿ "It is still not too late for India's voice to be heard", ಎಂಬ ಲೇಖನದಲ್ಲಿ ಅವರು ಬರೆದಿದ್ದಾರೆ.

ಈ ಲೇಖನ ಕೊಂಡಿಯನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಎರಡು ಕಡೆ ಭಾರೀ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸುತ್ತಿದ್ದರೂ ಭಾರತ ಇಲ್ಲಿಯವರೆಗೆ ಯಾವುದೇ ದೇಶದ ಪರ ನಿಲ್ಲದೇ ತಟಸ್ಥ ನಿಲುವು ತಳೆದಿದೆ. ಇರಾನ್ ಮೇಲೆ ಇಸ್ರೇಲ್ ನಡೆಸಿದ ಅಪಾಯಕಾರಿ ದಾಳಿ ಕಾನೂನುಬಾಹಿರ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಜೀವಗಳು ಬಲಿಯಾದಾಗ, ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತ್ಯಜಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ ಎಂದು ಹೇಳಿದ್ದಾರೆ.

ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಮಯದಲ್ಲಿ ಇರಾನ್ ಭಾರತದ ಪರವಾಗಿ ನಿಂತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿದೆ. ಈ ಮೊದಲು ಗಾಜಾ ಈಗ ಇರಾನ್‌ ವಿಚಾರಲ್ಲಿ ಮೌನವಾಗಿರುವುದು ಶಾಂತಿಯನ್ನು ಪ್ರತಿಪಾದಿಸುವ ನಮ್ಮ ವಿದೇಶಾಂಗ ನೀತಿಯ ನಿರ್ಗಮನವನ್ನು ಸೂಚಿಸುತ್ತದೆ. ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಭಾರತ ಈಗ ಮಾತನಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ಕಾನೂನುಬಾಹಿರ ದಾಳಿಯು ಅಪಾಯಕಾರಿ ಉಲ್ಬಣವಾಗಿದೆ - ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ. ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಜೀವಗಳು ಬಲಿಯಾದಾಗ, ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತ್ಯಜಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ.

ಕಾಶ್ಮೀರ ಸೇರಿದಂತೆ ನಿರ್ಣಾಯಕ ಕ್ಷಣಗಳಲ್ಲಿ ಇರಾನ್ ಭಾರತದ ಪರವಾಗಿ ನಿಂತಿದೆ. ಆದರೂ, ಭಾರತದ ಮೌನ - ಮೊದಲು ಗಾಜಾ ಮತ್ತು ಈಗ ಇರಾನ್ ಬಗ್ಗೆ - ಶಾಂತಿ ಮತ್ತು ಸಮತೋಲನದಲ್ಲಿ ಬೇರೂರಿರುವ ನಮ್ಮ ತತ್ವಬದ್ಧ ವಿದೇಶಾಂಗ ನೀತಿಯಿಂದ ತೊಂದರೆದಾಯಕ ನಿರ್ಗಮನವನ್ನು ಸೂಚಿಸುತ್ತದೆ.

ಭಾರತ ಮಾತನಾಡಬೇಕು. ನೈತಿಕ ಸ್ಪಷ್ಟತೆಗಾಗಿ ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT