ಸಚಿವ ಪ್ರಿಯಾಂಕ್ ಖರ್ಗೆ online desk
ರಾಜ್ಯ

ಅಮೆರಿಕ ಭೇಟಿಗೆ ಅನುಮತಿ ನಿರಾಕರಣೆ: ಸ್ಪಷ್ಟೀಕರಣ ಕೋರಿ ಇಎಎಂ ಜೈಶಂಕರ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಈ ಭೇಟಿಯು ರಾಜ್ಯದಲ್ಲಿ ಸಹಯೋಗಗಳನ್ನು ಬಲಪಡಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಬೆಂಗಳೂರು: ಕರ್ನಾಟಕದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ವಿದೇಶಾಂಗ ಸಚಿವ (ಇಎಎಂ) ಎಸ್ ಜೈಶಂಕರ್ ಅವರಿಗೆ ಪತ್ರ ಬರೆದು ಅಮೆರಿಕ ಭೇಟಿಗೆ ಅನುಮತಿ ಸಿಗದಿರುವ ಬಗ್ಗೆ ಸ್ಪಷ್ಟೀಕರಣ ಕೋರಿದ್ದಾರೆ.

ಈ ಕುರಿತ ಪತ್ರದ ಪ್ರತಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ಈ ಭೇಟಿಯು ರಾಜ್ಯದಲ್ಲಿ ಸಹಯೋಗಗಳನ್ನು ಬಲಪಡಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

'ನನ್ನ ಅಧಿಕೃತ ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದೇನೆ. ನಾನು ಪ್ರತಿನಿಧಿಸುವ ಕರ್ನಾಟಕದ ಜನರಿಗೆ ನಾನು ಜವಾಬ್ದಾರನಾಗಿರುತ್ತೇನೆ. ಆದ್ದರಿಂದ ನನಗೆ ಈ ಅಧಿಕೃತ ವಿದೇಶ ಭೇಟಿಗೆ ಏಕೆ ಅವಕಾಶ ನೀಡಲಿಲ್ಲ ಎಂಬುದನ್ನು ನಾನು ಅರ್ಥಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸ್ಪಷ್ಟೀಕರಣ ಕೋರಿದ್ದೇನೆ. ಈ ಭೇಟಿಯು ರಾಜ್ಯದಲ್ಲಿ ಸಹಯೋಗಗಳನ್ನು ಬಲಪಡಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿತ್ತು' ಎಂದು ಅವರು ಹೇಳಿದರು.

'ವಿಶ್ವದ ಅತಿದೊಡ್ಡ ತಂತ್ರಜ್ಞಾನ ಕೇಂದ್ರಗಳಲ್ಲಿ ಒಂದರ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿರುವ ಕ್ಯಾಬಿನೆಟ್ ಸಚಿವರು ವಿದೇಶದಲ್ಲಿ ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ನಿರಾಕರಿಸುವುದು ಮತ್ತು ಯಾವುದೇ ವಿವರಣೆಯನ್ನು ನೀಡದೆ ಹಾಗೆ ಮಾಡುವುದು ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಯ ಸಹಕಾರಿ ಮನೋಭಾವವನ್ನು ಸಹ ಹಾಳು ಮಾಡುತ್ತದೆ. ಸಚಿವಾಲಯವು ಆದಷ್ಟು ಬೇಗ ಸ್ಪಷ್ಟವಾದ ಲಿಖಿತ ಸ್ಪಷ್ಟೀಕರಣವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಹೇಳಿದ್ದಾರೆ.

'ಸದ್ಯಕ್ಕೆ ನಾನು ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದರಿಂದ ಹಿಂದೆ ಸರಿಯುತ್ತಿದ್ದೇನೆ. ನಾನು ಬೆಂಗಳೂರಿಗೆ ಹಿಂತಿರುಗಿದ ನಂತರ, ಈ ನಿರಾಕರಣೆಯ ಕುರಿತು ಭಾರತ ಸರ್ಕಾರದಿಂದ ಸ್ಪಷ್ಟ ವಿವರಣೆಯನ್ನು ಪಡೆಯುತ್ತೇನೆ' ಎಂದು ಖರ್ಗೆ X ನಲ್ಲಿ ಈ ಕುರಿತಾದ ಮಾಧ್ಯಮ ವರದಿಯೊಂದಕ್ಕೆ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ.

ಖರ್ಗೆ ಅವರು ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಐಟಿ ಬಿಟಿಗೆ ಸಂಬಂಧಪಟ್ಟಂತೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಅವರು ಭಾಗವಹಿಸಬೇಕಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT