ಸಾಂದರ್ಭಿಕ ಚಿತ್ರ 
ರಾಜ್ಯ

ಕೌಟುಂಬಿಕ ಕಲಹ ಹಿನ್ನೆಲೆ, ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ: ಜಮೀನಿನಲ್ಲಿ ನರಳಿ-ನರಳಿ ಪ್ರಾಣ ಬಿಟ್ಟ ಹಸು!

ಹಸುವಿನ ಮಾಲೀಕ ಮರಿ ಬಸವಯ್ಯ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಗುರುಸಿದ್ದಪ್ಪ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ಎರಡು ಕುಟುಂಬಗಳ ನಡುವಿನ ಜಗಳದಿಂದಾಗಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ದಕ್ಷಿಣ ಬೆಂಗಳೂರು ಜಿಲ್ಲೆಯ (ರಾಮನಗರ) ಸುಳಿವರ ಗ್ರಾಮದಲ್ಲಿ ನಡೆದಿದೆ.

ಹಸುವಿನ ಮಾಲೀಕ ಮರಿ ಬಸವಯ್ಯ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಗುರುಸಿದ್ದಪ್ಪ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಾವರೆಕೆರೆ ನ್ಯಾಯವ್ಯಾಪ್ತಿಯ ಪೊಲೀಸರು ತಿಳಿಸಿದ್ದಾರೆ.

ಗುರುಸಿದ್ದಪ್ಪ ಹಸುವಿನ ಕೆಚ್ಚಲು ಕತ್ತರಿಸಿದ ಶಂಕೆ ವ್ಯಕ್ತವಾಗಿದೆ. ರಕ್ತಸ್ರಾವವಾಗುತ್ತಿರುವ ಹಸುವನ್ನು ಗಮನಿಸಿದ ದಾರಿಹೋಕರು ಅದರ ಮಾಲೀಕರು ಮತ್ತು ಪಶುವೈದ್ಯರಿಗೆ ಮಾಹಿತಿ ನೀಡಿದರು. ಚಿಕಿತ್ಸೆಯ ಹೊರತಾಗಿಯೂ, ಶುಕ್ರವಾರ ಮಧ್ಯಾಹ್ನ ಹಸು ಸಾವನ್ನಪ್ಪಿದೆ. ಶವಪರೀಕ್ಷೆ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಹಸುಗಳ ನಡುವಿನ ಜಗಳ ಗಾಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಶವಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ. ತನ್ನ ಹೊಲಕ್ಕೆ ಪ್ರವೇಶಿಸಿದ ನಂತರ ಗುರುಸಿದ್ದಪ್ಪ ಹಸುವಿನ ಕೆಚ್ಚಲು ಕತ್ತರಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಲಾಗಿದೆ. ಜನವರಿಯಲ್ಲಿ, ನಗರದ ಕಾಟನ್‌ಪೇಟ್ ಪೊಲೀಸ್ ವ್ಯಾಪ್ತಿಯ ವಿನಾಯಕ ನಗರದಲ್ಲಿ ಬಿಹಾರದ ವ್ಯಕ್ತಿಯೊಬ್ಬ ಮೂರು ಹಸುಗಳ ಕೆಚ್ಚಲಿಗೆ ಗಾಯಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT