ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ: ಸಚಿವ ಪರಮೇಶ್ವರ್ ಯೂ-ಟರ್ನ್

ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ. ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ.

ಬೆಂಗಳೂರು: ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಲೆ ಮತ್ತು ಸಂಸ್ಕೃತಿ ವಿಭಿನ್ನವಾಗಿದೆ, ಅದರ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ. ತುಮಕೂರು ವೇಗವಾಗಿ ಬೆಳೆಯುತ್ತಿದೆ ಎಂಬುದು ನಿಜ. ನಮ್ಮ ಮೆಟ್ರೋ ಜಾಲವನ್ನು ಜಿಲ್ಲೆಗೆ ವಿಸ್ತರಿಸಲು ಮತ್ತು ಇಲ್ಲಿಗೆ ಹೆಚ್ಚಿನ ಕೈಗಾರಿಕೆಗಳನ್ನು ಆಹ್ವಾನಿಸಲು ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು.

ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಎಂದು ಕೇಳಿದಾಗ ನಾನು ಆದರೂ ಆಗಬಹುದು ಎಂದು ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆಂದು ಹೇಳಿರಲಿಲ್ಲ. ತುಮಕೂರಿನ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಅದಕ್ಕೆ ಅದರದೇ ಆದಂತ ಇತಿಹಾಸ ಸಂಸ್ಕೃತಿ ಇದೆ. ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ. ಆದರೂ ಆಗಬಹುದು ಎಂದಿದ್ದೆ. ಆದರೆ, ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ. ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ.ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ. ಅದಕ್ಕಾಗಿ ತುಮಕೂರು ಹೆಸರನ್ನು ಯಾವುದೇ ಕಾರಣಕ್ಕೂ ಎಷ್ಟೇ ಬದಲಾವಣೆ ಅಭಿವೃದ್ಧಿ ಆದರೂ ಹೆಸರನ್ನು ಮಾತ್ರ ಬದಲಾಯಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT