ಮೋದಿ- ದೇವೇಗೌಡ online desk
ರಾಜ್ಯ

ಮಾವು ಬೆಲೆ ಕುಸಿತ: ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಮೋದಿಗೆ ಹೆಚ್‌.ಡಿ ದೇವೇಗೌಡ ಮನವಿ

ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು.

ಬೆಂಗಳೂರು: ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಹಾಗೂ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‍ಗೆ ಅವರಿಗೆ ದೇವೇಗೌಡ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ, ಇದನ್ನು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ವಿಶೇಷವಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತದೆ, ರಬಿ ಋತುವಿನಲ್ಲಿ ಅಂದಾಜು 8-10 ಲಕ್ಷ ಟನ್ ಉತ್ಪಾದನೆಯಾಗುತ್ತದೆ. ಆದಾಗ್ಯೂ, ಪ್ರತಿಕೂಲ ಹವಾಮಾನ ಮತ್ತು ರೋಗಗಳಿಂದಾಗಿ, ಈ ವರ್ಷ ಮಾವಿನ ಇಳುವರಿ ಶೇಕಡಾ 30 ಕ್ಕಿಂತ ಕಡಿಮೆಯಾಗಿದೆ.

ಮಾವು ಬೆಲೆಗಳು ಕ್ವಿಂಟಲ್‌ಗೆ 12,000 ರೂ.ಗಳಿಂದ 2,000 ರೂ.ಗಳಿಗೆ ಇಳಿದಿವೆ, ಆದರೆ ಕೃಷಿ ವೆಚ್ಚ ಮಾತ್ರ ಕ್ವಿಂಟಲ್‌ಗೆ 5,466 ರೂ.ಗಳಷ್ಟಿಜೆ. ಇದು ರೈತರಿಗೆ ಆರ್ಥಿಕವಾಗಿ ಒತ್ತಡವನ್ನುಂಟು ಮಾಡಿದೆ, ಅನೇಕ ಸಣ್ಣ ಮತ್ತು ಅತಿ ಸಣ್ಣ ಮಾವು ಬೆಳೆಗಾರರು ಮೂಲಭೂತ ವೆಚ್ಚಗಳನ್ನು ಸಹ ಭರಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಗಡಿಯಲ್ಲಿರುವ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳನ್ನು ಪ್ರವೇಶಿಸುವುದನ್ನು ಆಂಧ್ರಪ್ರದೇಶ ನಿಷೇಧಿಸಿರುವುದರಿಂದ ಪೂರೈಕೆ ಸರಪಳಿಯಲ್ಲಿ ಅಡ್ಡಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೀಗಾಗಿ ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಮೂಲಕ ಮಾವು ಬೆಳೆಗಾರರಿಗೆ ನೆರವಾಗಬೇಕು. ಬೆಂಬಲ ಬೆಲೆಯಡಿ ಮಾವು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ತೋತಾಪುರಿ ಮಾವಿನ ಹಣ್ಣಿನ ನಿಷೇಧವನ್ನು ರದ್ದುಗೊಳಿಸುವಂತೆ ಆಂಧ್ರಪ್ರದೇಶ ಸರಕಾರಕ್ಕೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT