ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: ತಪ್ಪು ವೈದ್ಯಕೀಯ ವರದಿಯಿಂದ ಕೆಲಸ ಕಳೆದುಕೊಂಡ ನರ್ಸ್‌; 13.49 ಲಕ್ಷ ರೂ ಪರಿಹಾರಕ್ಕೆ ಕೋರ್ಟ್ ಆದೇಶ

43 ವರ್ಷದ ಶಿವಕುಮಾರ್ ಶೆಟ್ಟಿಗಾರ್ ಅವರು ಈ ಫೆಬ್ರವರಿಯಲ್ಲಿ ಗಲ್ಫ್ ರಾಷ್ಟ್ರದ ಯುನೈಟೆಡ್ ಮೆಡಿಕಲ್ ರೆಸ್ಪಾನ್ಸ್ ಕಂಪನಿಯಲ್ಲಿ ಇಂಡಸ್ಟ್ರಿಯಲ್ ನರ್ಸ್ ಆಗಿ ಆಯ್ಕೆಯಾಗಿದ್ದರು.

ಉಡುಪಿ: ತಪ್ಪು ವೈದ್ಯಕೀಯ ವರದಿಯಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಕಳೆದುಕೊಂಡ ಉಡುಪಿಯ ಹಿರಿಯ ನರ್ಸ್ ಒಬ್ಬರಿಗೆ 13.49 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಹಿರಿಯ ಸ್ಟಾಫ್ ನರ್ಸ್ ಆಗಿರುವ 43 ವರ್ಷದ ಶಿವಕುಮಾರ್ ಶೆಟ್ಟಿಗಾರ್ ಅವರು ಈ ಫೆಬ್ರವರಿಯಲ್ಲಿ ಗಲ್ಫ್ ರಾಷ್ಟ್ರದ ಯುನೈಟೆಡ್ ಮೆಡಿಕಲ್ ರೆಸ್ಪಾನ್ಸ್ ಕಂಪನಿಯಲ್ಲಿ ಇಂಡಸ್ಟ್ರಿಯಲ್ ನರ್ಸ್ ಆಗಿ ಆಯ್ಕೆಯಾಗಿದ್ದರು.

ಉದ್ಯೋಗ ಪ್ರಕ್ರಿಯೆ ನಿಮಿತ್ತ ಮಂಗಳೂರಿನ ರಾಷ್ಟ್ರೀಯ ಸಿಟಿ ಸ್ಕ್ಯಾನರ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಹೆಪಟೈಟಿಸ್ ಸಿ ಪಾಸಿಟಿವ್ ಇದೆ ಎಂದು ತಪ್ಪಾಗಿ ವರದಿ ನೀಡಲಾಗಿತ್ತು. ಇದು ಗಲ್ಫ್ ಸಹಕಾರ ಮಂಡಳಿ(GCC) ವೈದ್ಯಕೀಯ ಮಾನದಂಡಗಳ ಅಡಿಯಲ್ಲಿ ಅಭ್ಯರ್ಥಿಗಳನ್ನು ಅನರ್ಹಗೊಳಿಸಲು ಕಾರಣವಾಗಿತ್ತು.

ತಪ್ಪು ವೈದ್ಯಕೀಯ ವರದಿಯಿಂದ ವಿದೇಶಕ್ಕೆ ಹೋಗಲು ಸಾಧ್ಯವಾಗದ ಶೆಟ್ಟಿಗಾರ್ ಅವರು, ಮಣಿಪಾಲದ ಖಾಸಗಿ ಪ್ರಯೋಗಾಲಯದಲ್ಲಿ ಮತ್ತು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಫಾಲೋ-ಅಪ್ ಪರೀಕ್ಷೆಗೆ ಒಳಗಾದರು, ಇವೆರಡೂ ಪರೀಕ್ಷೆಯಲ್ಲಿ ಅವರಿಗೆ ಹೆಪಟೈಟಿಸ್ ಸಿ ನೆಗಟಿವ್ ದೃಢಪಟ್ಟಿತ್ತು.

ಬಳಿಕ ತಪ್ಪು ವರದಿ ನೀಡಿದ ಮಂಗಳೂರಿನ ರಾಷ್ಟ್ರೀಯ ಸಿಟಿ ಸ್ಕ್ಯಾನರ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ ವಿರುದ್ಧ ಶೆಟ್ಟಿಗಾರ್ ಅವರು ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿ, ಪ್ರಯೋಗಾಲಯದ ತಪ್ಪು ವರದಿಯಿಂದ ತಮ್ಮ ಕೆಲಸಕ್ಕೆ ಮಾತ್ರವಲ್ಲದೆ, ಭಾವನಾತ್ಮಕ ಮತ್ತು ಆರ್ಥಿಕ ಸಂಕಷ್ಟಕ್ಕೂ ಕಾರಣವಾಯಿತು ಎಂದು ವಾದಿಸಿದ್ದರು,

ನ್ಯಾಯಾಲಯ ಸಾಕ್ಷ್ಯಗಳನ್ನು ಪರಿಶೀಲಿಸಿ, ಎರಡೂ ಕಡೆಯ ವಾದ, ಪ್ರತಿವಾದ ಆಲಿಸಿದ ನಂತರ ಶೆಟ್ಟಿಗಾರ್ ಪರವಾಗಿ ತೀರ್ಪು ನೀಡಿದೆ. ಡಯಾಗ್ನೋಸ್ಟಿಕ್ ಸೆಂಟರ್‌, ನರ್ಸ್ ಗೆ 45 ದಿನಗಳಲ್ಲಿ 13.49 ಲಕ್ಷ ರೂ.ಗಳ ಪಾವತಿಸಲು ಸೂಚಿಸಿದೆ ಮತ್ತು ತಪ್ಪಿದಲ್ಲಿ ವಾರ್ಷಿಕ ಶೇ. 6 ರಷ್ಟು ಬಡ್ಡಿ ಅನ್ವಯಿಸುವುದಾಗಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಾಕಿಸ್ತಾನದ ಸಿಂಧ್ ಪ್ರಾಂತ್ಯ ಶೀಘ್ರವೇ ಭಾರತದ ವಶ; ಗಡಿಗಳು ಬದಲಾಗಲಿವೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್; ಪಾಕ್ ಗಡ ಗಡ!

'ತಾಯಿ ಎದೆ ಹಾಲಿನಲ್ಲೇ ಯುರೇನಿಯಂ ಅಂಶ, ಬಿಹಾರದಲ್ಲಿ ಶಿಶುಗಳ ಮೇಲೆ ಮಾರಕ ಪರಿಣಾಮ': ತಜ್ಞರು ಹೇಳಿದ್ದೇನು?

Video: 'ಮನೆಹಾಳು ಕೆಲಸ ಬೇಡ.. ನನ್ನ ಮತ್ತು ಕುಮಾರಸ್ವಾಮಿ ನಡುವೆ ತಂದಿಡಬೇಡಿ..': ಮಾಧ್ಯಮಗಳ ವಿರುದ್ಧ ಡಿಕೆ ಶಿವಕುಮಾರ್ ಕಿಡಿ

ಫ್ರಾನ್ಸ್ ನೌಕಾ ಪಡೆ ಕೈಲಿ ಸುಲುಕಿ ಜಾಗತಿಕವಾಗಿ ನಗೆಪಾಟಲಿಗೀಡಾದ ಪಾಕಿಸ್ತಾನ!

ನನಗೇನು ಗೊತ್ತಿಲ್ಲ, ನನ್ನೇನು ಕೇಳ್ಬೇಡಿ: ಏನೇ ಇದ್ದರೂ ತೀರ್ಮಾನ ಹೈಕಮಾಂಡ್ ಮಾಡುತ್ತೇ: ರಾಜ್ಯ ರಾಜಕಾರಣ ಕುರಿತು ಖರ್ಗೆ ಹೇಳಿಕೆ

SCROLL FOR NEXT