ಆರ್ ವಿ ದೇಶಪಾಂಡೆ  
ರಾಜ್ಯ

ಶಕ್ತಿ ಯೋಜನೆ ಬಳಿಕ ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ: ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ

ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಕಾರ್ಮಿಕರು, ಬಡವರು ಸೇರಿ ಎಲ್ಲ ವರ್ಗದವರಿಗೂ ಅನುಕೂಲ ದೊರೆತಿದೆ.

ಕೊಪ್ಪಳ ಜಿಲ್ಲೆ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಶಕ್ತಿ ಬಳಸಿಕೊಂಡು ಮಹಿಳೆಯರು ರಾಜ್ಯದ ಎಲ್ಲ ಭಾಗದಲ್ಲಿಯೂ ಓಡಾಡುತ್ತಿದ್ದಾರೆ. ಗಂಡುಮಕ್ಕಳಿಗೆ ಬಸ್‌ನಲ್ಲಿ ಹತ್ತಲು ಸಾಧ್ಯವಾಗುತ್ತಿಲ್ಲ. ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಭಾನುವಾರ ನಡೆದ ಕೆ.ಎಚ್‌. ಪಾಟೀಲ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಖರ್ಚಾಗುತ್ತಿದೆ. ನಾನು ಎಂಟು ಜನ ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ಅವರವರ ಆಡಳಿತದಲ್ಲಿ ಎಲ್ಲರೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದಾರೆ’ ಎಂದರು.

ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಕಾರ್ಮಿಕರು, ಬಡವರು ಸೇರಿ ಎಲ್ಲ ವರ್ಗದವರಿಗೂ ಅನುಕೂಲ ದೊರೆತಿದೆ. ಅದರಲ್ಲೂ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ದೇವಸ್ಥಾನಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ಇದರಿಂದ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ.

ಬಸ್‌ಗಳಲ್ಲಿ ಹತ್ತುವ ವೇಳೆ ಮಹಿಳೆಯರಿಂದ ಪುರುಷರು ಏಟು ತಿಂದಿರುವ ಪರಿಸ್ಥಿತಿಗಳೂ ಇವೆ ಎಂದರು. ಆಡಳಿತದಲ್ಲಿ ಸಾಕಷ್ಟು ಬದಲಾವಣೆಗಳು ಆಗಬೇಕಿದೆ. ನಿರ್ಧಾರಗಳು ಬೇಗನೆ ಮಾಡಬೇಕು. ಎಷ್ಟು ಬೇಗ ನಿರ್ಧಾರಗಳು ಆಗುತ್ತವೆಯೊ ಅಷ್ಟು ಬೇಗ ಜನರ ಕಷ್ಟಗಳು ಪರಿಹಾರವಾಗುತ್ತವೆ’ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT