ಬಿ.ಆರ್. ಪಾಟೀಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ಜೂನ್ 25ರಂದು ಭೇಟಿಯಾಗುವಂತೆ ಬಿ.ಆರ್ ಪಾಟೀಲ್'ಗೆ ಸಿಎಂ ಸೂಚನೆ

ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

ಬೆಂಗಳೂರು: ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೊಳಗಾಗುವಂತೆ ಮಾಡಿರುವ ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರಿಗೆ ಜೂನ್.25ರಂದು ಭೇಟಿಯಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಬಿ.ಆರ್. ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೂ. 25ರಂದು ಬೆಂಗಳೂರಿಗೆ ಬಂದು ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದಾರೆಂದೂ ಮೂಲಗಳು ತಿಳಿಸಿವೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ರಾಯಚೂರಿನಲ್ಲಿ ಕಾರ್ಯಕ್ರಮ ಇರುವ ಕಾರಣ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಹಾಜರಿರಲಿದ್ದಾರೆ. ಆರೋಪ ಸಂಬಂಧ ಚರ್ಚೆ ನಡೆಸೋಣ, ಈ ವೇಳೆ ಭೇಟಿಯಾಗುವಂತೆ ಸೂಚನೆ ನೀಡಿದ್ದೆ. ಆದರೆ, ಕಾರ್ಯಕ್ರಮಕ್ಕೆ ತಮಗೆ ಆಹ್ವಾನವಿರದ ಕಾರಣ ರಾಯಚೂರಿಗೆ ಬರಲು ಸಾಧ್ಯವಿಲ್ಲ ಎಂದು ಪಾಟೀಲ್ ಹೇಳಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸುತ್ತೇನೆಂದು ಹೇಳಿದ್ದರು.

ಇದೇ ವೇಳೆ ಶಾಸಕ ರಾಜು ಕಾಗೆ ಆರೋಪ ಕುರಿತು ಪ್ರತಿಕ್ರಿಯಿಸಿ, ರಾಜು ಕಾಗೆ ಅವರೊಂದಿಗೆ ಮಾತುಕತೆ ನಡೆಸಲಾವುದು ಎಂದು ತಿಳಿಸಿದ್ದಾರೆ.

ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಪಕ್ಷದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಒತ್ತಾಯಿಸಿರುವ ಕುರಿತು ಮಾತನಾಡಿ, ಯಾವ ಸಂದರ್ಭಗಳಲ್ಲಿ ಈ ಬೇಡಿಕೆ ಇಡಲಾಗಿದೆ ಎಂದು ತನಗೆ ತಿಳಿದಿಲ್ಲ ಎಂದರು.

ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT