ಬಿ.ಆರ್. ಪಾಟೀಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ಜೂನ್ 25ರಂದು ಭೇಟಿಯಾಗುವಂತೆ ಬಿ.ಆರ್ ಪಾಟೀಲ್'ಗೆ ಸಿಎಂ ಸೂಚನೆ

ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

ಬೆಂಗಳೂರು: ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೊಳಗಾಗುವಂತೆ ಮಾಡಿರುವ ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರಿಗೆ ಜೂನ್.25ರಂದು ಭೇಟಿಯಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಬಿ.ಆರ್. ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೂ. 25ರಂದು ಬೆಂಗಳೂರಿಗೆ ಬಂದು ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದಾರೆಂದೂ ಮೂಲಗಳು ತಿಳಿಸಿವೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ರಾಯಚೂರಿನಲ್ಲಿ ಕಾರ್ಯಕ್ರಮ ಇರುವ ಕಾರಣ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಹಾಜರಿರಲಿದ್ದಾರೆ. ಆರೋಪ ಸಂಬಂಧ ಚರ್ಚೆ ನಡೆಸೋಣ, ಈ ವೇಳೆ ಭೇಟಿಯಾಗುವಂತೆ ಸೂಚನೆ ನೀಡಿದ್ದೆ. ಆದರೆ, ಕಾರ್ಯಕ್ರಮಕ್ಕೆ ತಮಗೆ ಆಹ್ವಾನವಿರದ ಕಾರಣ ರಾಯಚೂರಿಗೆ ಬರಲು ಸಾಧ್ಯವಿಲ್ಲ ಎಂದು ಪಾಟೀಲ್ ಹೇಳಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸುತ್ತೇನೆಂದು ಹೇಳಿದ್ದರು.

ಇದೇ ವೇಳೆ ಶಾಸಕ ರಾಜು ಕಾಗೆ ಆರೋಪ ಕುರಿತು ಪ್ರತಿಕ್ರಿಯಿಸಿ, ರಾಜು ಕಾಗೆ ಅವರೊಂದಿಗೆ ಮಾತುಕತೆ ನಡೆಸಲಾವುದು ಎಂದು ತಿಳಿಸಿದ್ದಾರೆ.

ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಪಕ್ಷದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಒತ್ತಾಯಿಸಿರುವ ಕುರಿತು ಮಾತನಾಡಿ, ಯಾವ ಸಂದರ್ಭಗಳಲ್ಲಿ ಈ ಬೇಡಿಕೆ ಇಡಲಾಗಿದೆ ಎಂದು ತನಗೆ ತಿಳಿದಿಲ್ಲ ಎಂದರು.

ಗಣಿಗಾರಿಕೆ ಹಗರಣದ ಕುರಿತು ಸಚಿವ ಎಚ್.ಕೆ. ಪಾಟೀಲ್ ಅವರ ಪತ್ರದ ಕುರಿತು ಮಾತನಾಡಿ, ಈ ಹಗರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್