ವೃದ್ಧ ದಂಪತಿ 
ರಾಜ್ಯ

ಬೆಂಗಳೂರು: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು

ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ಕೃಷ್ಣಮೂರ್ತಿ(81 ವರ್ಷ) ಹಾಗೂ ರಾಧಾ(74 ವರ್ಷ) ಎಂದು ಗುರುತಿಸಲಾಗಿದೆ.

ಬೆಂಗಳೂರು: ಮಗ ತಮ್ಮನ್ನು ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ಕೃಷ್ಣಮೂರ್ತಿ(81 ವರ್ಷ) ಹಾಗೂ ರಾಧಾ(74 ವರ್ಷ) ಎಂದು ಗುರುತಿಸಲಾಗಿದೆ.

ಸೊಸೆಯೊಂದೆ ಹೊಂದಾಣಿಕೆಯಾಗದ ಕಾರಣ ಬೇರ ಮನೆ ಮಾಡಿಕೊಡುವಂತೆ ಮಗನಿಗೆ ತಂದೆ, ತಾಯಿ ಕೇಳಿದ್ದರು. ಆದರೆ, ಪುತ್ರ 2021ರಲ್ಲಿ ತಂದೆ, ತಾಯಿಯನ್ನು ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಬಳಿಕ 2023ರಲ್ಲಿ ತಂದೆ, ತಾಯಿಯನ್ನು ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದರು. ವೃದ್ಧಾಶ್ರಮದಿಂದ ವಾಪಸ್​ ಬಂದ ನಂತರ ವೃದ್ಧ ದಂಪತಿಗೆ ಮತ್ತೆ ಮನೆಯಲ್ಲಿ ಹೊಂದಾಣಿಕೆಯಾಗಿರಲಿಲ್ಲ. ಹೀಗಾಗಿ, ಕಳೆದ ತಿಂಗಳು ಮತ್ತೆ ಬನಶಂಕರಿ ನಗರದಲ್ಲಿರುವ ವೃದ್ಧಾಶ್ರಮಕ್ಕೆ ತಂದೆ, ತಾಯಿಯನ್ನು ಪುತ್ರ ಸೇರಿಸಿದ್ದನು. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.

ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆ ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ, ಟಿವಿ ನೋಡುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು ಎಂದು ವೃದ್ಧಾಶ್ರಮದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

SCROLL FOR NEXT