ಲೋಕಾಯುಕ್ತ ಕಚೇರಿ  
ರಾಜ್ಯ

ತಪ್ಪಿತಸ್ಥ ಕಾನ್‌ಸ್ಟೆಬಲ್ ಜೊತೆ IPS ಅಧಿಕಾರಿ ಸಂಬಂಧ ಹೊಂದಲು ಹೇಗೆ ಸಾಧ್ಯ?: ಲೋಕಾಯುಕ್ತ ವಿಶೇಷ ಕೋರ್ಟ್ ಪ್ರಶ್ನೆ

ಜೋಶಿ ವಿರುದ್ಧದ ಆರೋಪಗಳು ಗಂಭೀರವಾದವು ಮತ್ತು ಪ್ರಕರಣದಲ್ಲಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು: ಲೋಕಾಯುಕ್ತದಲ್ಲಿ ಉನ್ನತ ಹುದ್ದೆಯಲ್ಲಿರುವ ಐಪಿಎಸ್ ಅಧಿಕಾರಿ (ಶ್ರೀನಾಥ್ ಜೋಶಿ ಮಹಾದೇವ್) ಒಬ್ಬ ಹೆಡ್ ಕಾನ್‌ಸ್ಟೆಬಲ್ (ನಿಂಗಪ್ಪ) ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿದೂ ಸಹ, ಅವರ ಕಚೇರಿಯಲ್ಲಿ ನಿರಂತರವಾಗಿ ಭೇಟಿಯಾಗುತ್ತಿದ್ದರು ಹಾಗೂ ಹೇಗೆ ಸಂಪರ್ಕದಲ್ಲಿದ್ದರು? ಲೋಕಾಯುಕ್ತ ವಿಶೇಷ ಕೋರ್ಟ್ ಪ್ರಶ್ನಿಸಿದೆ.

ನಿಂಗಪ್ಪನ ಜೊತೆ ಆರೋಪದಲ್ಲಿ ಭಾಗಿಯಾಗಿಲ್ಲದಿದ್ದರೆ ಅಥವಾ ಅವನೊಂದಿಗೆ ಯಾವುದೇ ಸಂಬಂಧವಿಲ್ಲದಿದ್ದರೆ, ಕ್ರಿಪ್ಟೋಕರೆನ್ಸಿ ಮತ್ತು ಕ್ರಿಪ್ಟೋ ವ್ಯಾಲೆಟ್‌ನಲ್ಲಿ ಮಾಡಿದ ಹೂಡಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವನು ಜೋಶಿ ಜೊತೆ ಹೇಗೆ ಹಂಚಿಕೊಂಡಿದ್ದಾನೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಜೋಶಿ ಪರ ವಕೀಲರನ್ನು ಪ್ರಶ್ನಿಸಿದ್ದಾರೆ.

ಜೋಶಿ ವಿರುದ್ಧದ ಆರೋಪಗಳು ಗಂಭೀರವಾದವು ಮತ್ತು ಪ್ರಕರಣದಲ್ಲಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿದೆ ಎಂದು ನ್ಯಾಯಾಲಯ ಹೇಳಿದೆ. ಜೂನ್ 30 ರವರೆಗೆ ಈ ಅಪರಾಧದ ಮುಂದಿನ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಜೋಶಿ ನಿಂಗಪ್ಪ ಜೊತೆ ಕೈಜೋಡಿಸಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ಹಣ ಪಡೆಯಲು ಸಂಚು ರೂಪಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಅವರು ನಿಂಗಪ್ಪ ಮೂಲಕ ಅಧಿಕಾರಿಗಳಿಗೆ ಫೋನ್ ಕರೆಗಳನ್ನು ಮಾಡುತ್ತಿದ್ದರು ಮತ್ತು ಅಕ್ರಮವಾಗಿ ಹಣ ಪಡೆಯುತ್ತಿದ್ದರು, ಅವರ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ನಿಂಗಪ್ಪ ಸಹಾಯದಿಂದ ಲಂಚವನ್ನು ಕ್ರಿಪ್ಟೋಕರೆನ್ಸಿ ವ್ಯಾಲೆಟ್‌ಗಳು ಮತ್ತು ಬಿಟ್‌ಕಾಯಿನ್‌ಗಳಲ್ಲಿ ಹೂಡಿಕೆ ಮಾಡುತ್ತಿದ್ದರು ಎಂದು ಹೇಳಿದರು

ಜೋಶಿ ಪರ ವಕೀಲರು ಚಿತ್ರದುರ್ಗದಲ್ಲಿ ಎಸ್‌ಪಿಯಾಗಿದ್ದಾಗ ನಿಂಗಪ್ಪ ಎರಡು ವರ್ಷಗಳ ಕಾಲ ತಮ್ಮ ಅಧೀನ ಅಧಿಕಾರಿಯಾಗಿದ್ದ ಕಾರಣ, ದೂರಿನಲ್ಲಿ ಅಥವಾ ಎಫ್‌ಐಆರ್‌ನಲ್ಲಿ ಅವರ ಹೆಸರು ಇಲ್ಲದಿದ್ದರೂ, ನಿಂಗಪ್ಪ ಅವರೊಂದಿಗಿನ ಸಂಪರ್ಕದ ಬಗ್ಗೆ ಶಂಕೆ ಇದೆ ಎಂದು ವಾದಿಸಿದರು. ಜೋಶಿ ನಿರಪರಾಧಿ ಆದರೆ ಪ್ರಕರಣದಲ್ಲಿ ಅವರನ್ನು ತಪ್ಪಾಗಿ ಸಿಲುಕಿಸಲಾಗಿದೆ, ಇದು ಆಗಸ್ಟ್‌ನಲ್ಲಿ ಅವರ ಬಡ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ವಕೀಲರು ಆರೋಪಿಸಿದರು.

ಜೋಶಿ ಅವರೊಂದಿಗಿನ ಸಂಬಂಧದ ಬಗ್ಗೆ ನಿಂಗಪ್ಪ ಅವರ ಕುರುಡು ಹೇಳಿಕೆಯನ್ನು ಹೊರತುಪಡಿಸಿ, ಅವರ ವಿರುದ್ಧ ಯಾವುದೇ ಸಾಕ್ಷ್ಯಗಳು ಕಂಡುಬಂದಿಲ್ಲ. ಲೋಕಾಯುಕ್ತದಿಂದ ಬಿಡುಗಡೆಗೊಂಡು ಮಾತೃ ಇಲಾಖೆಗೆ ವರದಿ ಮಾಡಿರುವುದರಿಂದ, ಸಾಕ್ಷಿಗಳನ್ನು ತಿರುಚುವ ಅಥವಾ ಬೆದರಿಕೆ ಹಾಕುವ ಪ್ರಶ್ನೆಯೇ ಇಲ್ಲ. ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದರೆ, ಜೋಶಿ ಅವರ ಸೇವಾ ದಾಖಲೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದರು ಎಂದು ಜೋಶಿ ಪರ ವಕೀಲರು ತಿಳಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಮಂಜುನಾಥ ಹೊನ್ನಯ್ಯ ನಾಯಕ್, ಜೋಶಿ ನಿಂಗಪ್ಪ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಮತ್ತು ಕರೆ ವಿವರಗಳ ದಾಖಲೆಗಳು, ಲೋಕಾಯುಕ್ತ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋಟೋಗಳಿವೆ ಎಂದು ಹೇಳಿದರು. ಅಲ್ಲದೆ, ಜೋಶಿ ನಿಂಗಪ್ಪ ಅವರೊಂದಿಗೆ ಕ್ರಿಪ್ಟೋಕರೆನ್ಸಿ ಹೂಡಿಕೆಗಳು ಮತ್ತು ಕ್ರಿಪ್ಟೋ ವ್ಯಾಲೆಟ್‌ಗಳ ವಾಟ್ಸಾಪ್ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದರು ಎಂದು ಅವರು ವಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT