ಪುನೀತ್-ಪ್ರೀತಿ 
ರಾಜ್ಯ

ಮಂಡ್ಯ: 4 ದಿನಗಳ ಹಿಂದೆ Instagram ನಲ್ಲಿ ಪರಿಚಯ; ಕಾರಿನಲ್ಲೇ ಕಾಮಕ್ಕಾಗಿ ಪೀಡಿಸಿದ ಗೃಹಿಣಿಯನ್ನು ಕೊಂದ ಪ್ರಿಯಕರ!

ಮಂಡ್ಯದಲ್ಲಿ ಗೃಹಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಮಾಹಿತಿಗಳು ಹೊರಬಂದಿವೆ.

ಮಂಡ್ಯ: ಮಂಡ್ಯದಲ್ಲಿ ಗೃಹಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಮಾಹಿತಿಗಳು ಹೊರಬಂದಿವೆ. ಮದುವೆಯಾಗಿ ಗಂಡ ಮಕ್ಕಳೊಂದಿಗೆ ನೆಮ್ಮದಿಯಾಗಿದ್ದ 38 ವರ್ಷದ ಪ್ರೀತಿ ಕೇವಲ 4 ದಿನಗಳ ಹಿಂದೆ ಇನ್​ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವಕನ ಕೈಯಲ್ಲೆ ಹತ್ಯೆಯಾಗಿದ್ದಾಳೆ. ಹಾಸನ ಜಿಲ್ಲೆ ಹೊಸಕೊಪ್ಪಲು ಗ್ರಾಮದ ಪ್ರೀತಿ, ಮಂಡ್ಯದ ಕೆಆರ್ ಪೇಟೆ ತಾಲೂಕಿನ ಕರೋಟಿ ಗ್ರಾಮದ ಯುವಕ ಪುನೀತ್​ನೊಂದಿಗೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು.

ಲಾಡ್ಜ್ ಒಂದರಲ್ಲಿ ಲೈಂಗಿಕ ಕ್ರಿಯೆಯಲ್ಲಿ ಭಾಗಿಯಾಗಿ ನಂತರ ಪ್ರೀತಿ ಆತನಿಂದಲೇ ಕೊಲೆಯಾಗಿದ್ದಾಳೆ. ಇನ್ನು ಪ್ರೀತಿ ಕಾಣೆಯಾಗಿರುವ ಬಗ್ಗೆ ಆಕೆಯ ಗಂಡ ಸುಂದರೇಶ್ ಎನ್ನುವವರು ದೂರು ದಾಖಲಿಸಿದ್ದರು. ಪ್ರಕರಣದ ಕುರಿತಂತೆ ತನಿಖೆಗೆ ಇಳಿದ ಪೊಲೀಸರಿಗೆ ಪ್ರೀತಿ ಶವ ಕರೋಟಿ ಗ್ರಾಮದಲ್ಲಿರುವ ಪುನೀತ್ ಜಮೀನಲ್ಲಿ ಸಿಕ್ಕಿತ್ತು. ಈ ಸಂಬಂಧ ಪುನೀತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಘಾತಕಾರಿ ಸಂಗತಿಗಳು ಬಯಲಿಗೆ ಬಂದಿವೆ. ಪ್ರೀತಿ Sex ಗಾಗಿ ಪೀಡಿಸುತ್ತಿದ್ದರಿಂದ ಆಕೆಯನ್ನು ಹತ್ಯೆ ಮಾಡಿದ್ದಾಗಿ ಪುನೀತ್ ಹೇಳಿದ್ದಾನೆ.

ಪುನೀತ್‌ ಪ್ರೀತಿ ಇಬ್ಬರೂ ಕಳೆದ ಭಾನುವಾರ ಮಂಡ್ಯ ಹಾಗೂ ಮೈಸೂರಿನಲ್ಲಿ ಸುತ್ತಾಡಿದ್ದಾರೆ. ಬಳಿಕ ಕೆ ಆರ್ ಪೇಟೆಯ ಕತ್ತರಘಟ್ಟ ಫಾರೆಸ್ಟ್‌ ಏರಿಯಾದಲ್ಲಿ ಇಬ್ಬರ ನಡುವೆ ಜಗಳ ಆಗಿದ್ದು, ಪ್ರೀತಿಯ ಹತ್ಯೆ ಮಾಡಿದ ಪುನೀತ್ ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಎತ್ತಿಕೊಂಡು ಆಕೆಯ ಶವವನ್ನು ಕರೋಟಿ ಗ್ರಾಮದ ತನ್ನ ಜಮೀನಿನಲ್ಲಿ ಹೂತು ಹಾಕಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT