ಸುದ್ದಿ ಮುಖ್ಯಾಂಶಗಳು online desk
ರಾಜ್ಯ

News headlines 25-06-2025 | ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: ED ದಾಳಿ; ಶಾಸಕರ ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಿ- ಸಿಎಂ ಗೆ ಹೈಕಮಾಂಡ್ ವಾರ್ನಿಂಗ್; ಇನ್ಮುಂದೆ CBSE 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ

ಶಾಸಕರ ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಿ- ಸಿಎಂ ಗೆ ಹೈಕಮಾಂಡ್ ಖಡಕ್ ವಾರ್ನಿಂಗ್

ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದೇ ವೇಳೆ, ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹಾಗೂ ಇತರರು ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ. ‘ಮುಂದೆ ಹೀಗೆ ಆದರೆ ಸಹಿಸಲು ಸಾಧ್ಯವಿಲ್ಲ. ಹೇಳಿಕೆ ನೀಡುತ್ತಿರುವವರನ್ನು ಕರೆದು ಮಾತನಾಡಿ’ ಎಂದು ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ ಎಂಬುದು ತಿಳಿದುಬಂದಿದೆ. ಬಿಆರ್ ಪಾಟೀಲ್ ಎರಡನೇ ಬಾರಿ ಈ ರೀತಿಯಾದ ಹೇಳಿಕೆ ನೀಡಿದ್ದಾರೆ. ಅವರನ್ನು ಕರೆದು ಮಾತನಾಡಿ. ಮುಂದೆ ಇದೇ ರೀತಿ ಆದರೆ ಸಹಿಸಲು ಸಾಧ್ಯವಿಲ್ಲ. ಇನ್ನೊಮ್ಮೆ ಬಹಿರಂಗ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ: ED ದಾಳಿ

ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ನಗರದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ & ತಂತ್ರಜ್ಞಾನ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಕಾಲೇಜು ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳನ್ನು ಒಳಗೊಂಡಂತೆ ಒಟ್ಟು 18 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಕೆಲವು ದಾಖಲೆಗಳು ಮತ್ತು ಕಂಪ್ಯೂಟರ್ ಹಾರ್ಡ್‌ವೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಗಗನಯಾತ್ರಿ ShubhanshuShukla ತಂಡವಿರುವ ಆಕ್ಸಿಯಮ್-4 ಮಿಷನ್ ಯಶಸ್ವಿ

ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್ ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಉಡಾವಣೆಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಈ ಮಿಷನ್ ಉಡಾವಣೆಯಾಗಿದ್ದು, ಗುರುವಾರ ಸಂಜೆ 4:30 ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ. ಇಸ್ರೋ ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. Axiom-4 ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸುಮಾರು 41 ವರ್ಷದ ನಂತರ ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇನ್ನು ಮುಂದೆ CBSE 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ 10ನೇ ತರಗತಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮಾನದಂಡಗಳನ್ನು ಅನುಮೋದಿಸಿದ್ದು, ಮುಂದಿನ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳು ಒಂದು ಶೈಕ್ಷಣಿಕ ಅವಧಿಯಲ್ಲಿ ಎರಡು ಬಾರಿ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ಬರೆಯಬೇಕಾಗುತ್ತದೆ. ಫೆಬ್ರವರಿಯಲ್ಲಿ ನಡೆಯುವ ಮೊದಲ ಹಂತದ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮವನ್ನು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ(ಎನ್‌ಇಪಿ) ಶಿಫಾರಸು ಮಾಡಲಾಗಿದೆ. ಮೊದಲ ಹಂತವನ್ನು ಫೆಬ್ರವರಿಯಲ್ಲಿ ಮತ್ತು ಎರಡನೇ ಹಂತವನ್ನು ಮೇನಲ್ಲಿ ನಡೆಸಲಾಗುವುದು. ಎರಡು ಹಂತಗಳ ಫಲಿತಾಂಶ ಕ್ರಮವಾಗಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ತಿಳಿಸಿದ್ದಾರೆ.

14 ಔಷಧಿಗಳ ಗುಣಮಟ್ಟ ಕಳಪೆ- ಸರ್ಕಾರಿ ಔಷಧ ಪರೀಕ್ಷಾ ಪ್ರಯೋಗಾಲಯ

ಕರ್ನಾಟಕ ಸರ್ಕಾರದ ಔಷಧ ಪರೀಕ್ಷಾ ಪ್ರಯೋಗಾಲಯವು ಬುಧವಾರ 14 ವಿವಿಧ ಕಂಪನಿಗಳು ತಯಾರಿಸಿದ 14 ಔಷಧಿಗಳನ್ನು "ಗುಣಮಟ್ಟದವಲ್ಲ" ಎಂದು ಘೋಷಿಸಿದೆ. ರಾಜ್ಯದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ರಸಾಯನಶಾಸ್ತ್ರಜ್ಞರು, ಸಗಟು ವ್ಯಾಪಾರಿಗಳು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳಿಗೆ ಈ ಔಷಧಿಗಳು ಮತ್ತು ಸೌಂದರ್ಯವರ್ಧಕಗಳನ್ನು ಸಂಗ್ರಹಿಸಬಾರದು, ಮಾರಾಟ ಮಾಡಬಾರದು ಅಥವಾ ಬಳಸಬಾರದು ಎಂದು ನಿರ್ದೇಶಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಕಳಪೆ ಗುಣಮಟ್ಟದ ಔಷಧಿಗಳಲ್ಲಿ ಅಲ್ಟ್ರಾ ಲ್ಯಾಬೋರೇಟರೀಸ್ ಮತ್ತು ಟಾಮ್ ಬ್ರಾನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಸಂಯುಕ್ತ ಸೋಡಿಯಂ ಲ್ಯಾಕ್ಟೇಟ್ ಇಂಜೆಕ್ಷನ್ ಐಪಿ; ಅಬಾನ್ ಫಾರ್ಮಾಸ್ಯುಟಿಕಲ್ಸ್ ನಿಂದ ಪೊಮೊಲ್-650 ಮತ್ತು ಬಯೋನ್ ಥೆರಪ್ಯೂಟಿಕ್ಸ್ ಇಂಡಿಯಾದ MITO Q7 ಸಿರಪ್ ಸೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT