ಮೂವರ ಹತ್ಯೆ ನಡೆದ ಡ್ರೈವರ್ ಡಾಬಾ 
ರಾಜ್ಯ

ಕಲಬುರಗಿ: ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ!

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆಗಳು ನಡೆದಿವೆ ಎಂದು ಹೇಳಲಾಗಿದೆ. ಕಳೆದ ವರ್ಷ ನವೆಂಬರ್ 12 ರಂದು ಈ ಡಾಬಾ ಬಳಿ ಯುವಕ ಸೋಮು ರಾಥೋಡ್ ಹತ್ಯೆಯಾಗಿತ್ತು.

ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಬಳಿ ಡಾಬದಲ್ಲಿ ಬೆಳ್ಳಂಬೆಳಗ್ಗೆ ಮೂವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೃತರನ್ನು ಡಾಬಾದ ಮಾಲೀಕರು ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ.

ಮಂಗಳವಾರ ತಡರಾತ್ರಿ ರಾತ್ರಿ 11.30 ರ ಸುಮಾರಿಗೆ ಡಾಬಾಗೆ ನುಗ್ಗಿದ ಸುಮಾರು 8-10 ದುಷ್ಕರ್ಮಿಗಳು ಮಾಲೀಕ ಮತ್ತು ನೌಕರರು ಕೆಲಸ ಮಾಡುತ್ತಿದ್ದಾಗ ಮೂವರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆಗಳು ನಡೆದಿವೆ ಎಂದು ಹೇಳಲಾಗಿದೆ. ಕಳೆದ ವರ್ಷ ನವೆಂಬರ್ 12 ರಂದು ಈ ಡಾಬಾ ಬಳಿ ಯುವಕ ಸೋಮು ರಾಥೋಡ್ ಹತ್ಯೆಯಾಗಿತ್ತು.

ಮೃತ ಸೋಮು ರಾಥೋಡ್ ಡಾಬಾ ಮಾಲೀಕರೊಂದಿಗೆ 2 ಬಿಯರ್ ಬಾಟಲಿಗಳಿಗೆ ಹಣ ಪಾವತಿ ಮಾಡುವ ಸಂಬಂಧ ಜಗಳವಾಡಿದ್ದ. ನಂತರ ಡಾಬಾದ ಮಾಲೀಕರು ಮತ್ತು ನೌಕರರ ಮೇಲೆ ಹಲ್ಲೆ ನಡೆಸಿದ್ದ ಎಂದು ತಿಳಿದು ಬಂದಿದೆ.

ಇದಕ್ಕೆ ಪ್ರತೀಕಾರವಾಗಿ ಡಾಬಾ ಮಾಲೀಕ ಮತ್ತು ಅವನ ಸಹಚರರು ಸೋಮು ರಾಥೋಡ್ ಮೇಲೆ ಹಲ್ಲೆ ನಡೆಸಿ ಕೊಂದು ಶವವನ್ನು ನಗರದ ಹೊರವಲಯದಲ್ಲಿ ಎಸೆದಿದ್ದರು. ಸೋಮು ರಾಥೋಡ್ ಹತ್ಯೆಗೆ ಸಂಬಂಧಿಸಿದಂತೆ, ಡಾಬಾದ ಮಾಲೀಕ ದಿವಂಗತ ಸಿದ್ದಾರೂಢ, ಜಗದೀಶ್ ಮತ್ತು ಆ ಸಮಯದಲ್ಲಿದ್ದ ಇತರ ಕೆಲವರನ್ನು ಪೊಲೀಸರು ಬಂಧಿಸಿದರು.

ಇತ್ತೀಚೆಗೆ ಸಿದ್ದಾರೂಢ ಮತ್ತು ಜಗದೀಶ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಸಿದ್ದಾರೂಢ ಧಾಬಾದಲ್ಲಿ ತಮ್ಮ ಕೆಲಸವನ್ನು ಮತ್ತೆ ಪ್ರಾರಂಭಿಸಿದ್ದ ಎಂದು ಮೂಲಗಳು ತಿಳಿಸಿವೆ. ಸೋಮು ರಾಥೋಡ್ ಹತ್ಯೆಗೆ ಪ್ರತೀಕಾರವಾಗಿ, ಮಂಗಳವಾರ ತಡರಾತ್ರಿ ಸೋಮು ರಾಥೋಡ್ ಅವರ ಸಹಚರರು ಸಿದ್ದಾರೂಢ ಮತ್ತು ಇತರ ಇಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಲಬುರಗಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT