ಸಂತ್ರಸ್ತ ಸುರೇಶ್ ಕುಟುಂಬದೊಂದಿಗೆ ವಕೀಲರು 
ರಾಜ್ಯ

Mysuru: ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಜೈಲು ಶಿಕ್ಷೆ; 5 ಕೋಟಿ ರೂ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ!

ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಅವರನ್ನು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಏಪ್ರಿಲ್‌ನಲ್ಲಿ ಸಂಪೂರ್ಣ ಗೌರವಗಳೊಂದಿಗೆ ಖುಲಾಸೆಗೊಳಿಸಿತ್ತು.

ಮೈಸೂರು: ಪತ್ನಿ ಹತ್ಯೆಯ ಆರೋಪದಲ್ಲಿ ಸುಮಾರು ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಬುಡಕಟ್ಟು ವ್ಯಕ್ತಿಯೋರ್ವ, ತದನಂತರ ಪತ್ನಿ ಬದುಕಿರುವುದನ್ನು ಪತ್ತೆ ಹಚ್ಚಿದ್ದು, ತನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ 5 ಕೋಟಿ ರೂಪಾಯಿ ಪರಿಹಾರ ಮತ್ತು ಕ್ರಿಮಿನಲ್ ಕ್ರಮಕ್ಕಾಗಿ ಒತ್ತಾಯಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಅವರನ್ನು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಏಪ್ರಿಲ್‌ನಲ್ಲಿ ಸಂಪೂರ್ಣ ಗೌರವಗಳೊಂದಿಗೆ ಖುಲಾಸೆಗೊಳಿಸಿತ್ತು. ಅವರಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಕರ್ನಾಟಕ ಗೃಹ ಇಲಾಖೆಗೆ ಕೋರ್ಟ್ ಸೂಚಿಸಿತ್ತು. ಇದರಿಂದ ಅಸಮಾಧಾನಗೊಂಡ ಸುರೇಶ್ ಈಗ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ.

ಸುರೇಶ್ ಅವರು ತಮ್ಮ ಅರ್ಜಿಯಲ್ಲಿ ಅಂದಿನ ತನಿಖಾಧಿಕಾರಿ ಪ್ರಕಾಶ್ ಬಿಜಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್, ಸಬ್ ಇನ್ಸ್ ಪೆಕ್ಟರ್ ಗಳಾದ ಪ್ರಕಾಶ ಯಟ್ಟಿಮನಿ ಮತ್ತು ಮಹೇಶ ಬಿಕೆ, ಸಹಾಯಕ ಸಬ್ ಇನ್ಸ್ ಪೆಕ್ಟರ್ ಸೋಮಶೇಖರ ಸೇರಿದಂತೆ ಐವರು ಅಧಿಕಾರಿಗಳನ್ನು ಹೆಸರಿಸಿದ್ದಾರೆ. ಈ ಅಧಿಕಾರಿಗಳು ಸಾಕ್ಷ್ಯವನ್ನು ತಿರುಚಿದ್ದು, ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸರಿಯಾದ ಪ್ರಕ್ರಿಯೆ ನಡೆಸದೆ ಅಕ್ರಮವಾಗಿ ನನ್ನನ್ನು ಬಂಧಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಸುರೇಶ್ ಅವರು ಅಧಿಕಾರಿಗಳ ವಿರುದ್ಧ ಆರ್ಥಿಕ ಹಾನಿ ಮತ್ತು ಕ್ರಿಮಿನಲ್ ಮೊಕದ್ದಮೆ ಎರಡನ್ನೂ ಹಾಕಿದ್ದಾರೆ.

ಏನಿದು ಪ್ರಕರಣ? ಇದು 2021 ರ ಹಿಂದಿನ ಪ್ರಕರಣ. ಪತ್ನಿ ಮಲ್ಲಿಗೆ ನಾಪತ್ತೆಯಾದ ನಂತರ ಕಾಣೆಯಾದ ನಂತರ ಸುರೇಶ್ ಪ್ರಕರಣ ದಾಖಲಿಸಿದ್ದರು. 2022 ರಲ್ಲಿ, ನೆರೆಯ ಮೈಸೂರು ಜಿಲ್ಲೆಯ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಅಸ್ಪಷ್ಪ ಗುರುತಿನ ಕಾರಣ ಪೊಲೀಸರು ಮಲ್ಲಿಗೆ ಎಂದೇ ಶಂಕಿಸಿದ್ದರು. DNA ಹೊಂದಾಣಿಕೆ ಇಲ್ಲದಿದ್ದರೂ ಸುರೇಶ್‌ನನ್ನು ಬಂಧಿಸಿ ಮಲ್ಲಿಗೆ ಕೊಲೆ ಆರೋಪ ಹೊರಿಸಲಾಗಿತ್ತು. ಡಿಎನ್‌ಎ ಪರೀಕ್ಷೆ ಮಲ್ಲಿಗೆಯ ಅವಶೇಷಗಳಲ್ಲ ಎಂದು ನ್ಯಾಯಾಲಯ ದೃಢಪಡಿಸುವವರೆಗೂ ಅವರು ಸುಮಾರು 18 ತಿಂಗಳ ಕಾಲ ಬಂಧನದಲ್ಲಿದ್ದರು. ನಂತರ ಸುರೇಶ್‌ಗೆ ಜಾಮೀನು ನೀಡಿ ಬಿಡುಗಡೆ ಮಾಡಲಾಯಿತು.

ಏಪ್ರಿಲ್ 2025 ರಲ್ಲಿ ಮಲ್ಲಿಗೆ ಮಡಿಕೇರಿಯ ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗ ಸುರೇಶ್ ಅವರ ಸ್ನೇಹಿತರ ಕಣ್ಣಿಗೆ ಕಾಣಿಸಿಕೊಂಡಿದ್ದರು. ತದನಂತರ ಬೆಟ್ಟದಪುರ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಮೈಸೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಕೆಯ ಹಾಜರಾತಿಯಿಂದ ಫೋರೆನ್ಸಿಕ್ ಪುರಾವೆಗಳ ನಿರ್ವಹಣೆ ಮತ್ತು ಪ್ರಕರಣ ಸಂಪೂರ್ಣ ನಿರ್ಲಕ್ಷ್ಯ ಅಥವಾ ಉದ್ದೇಶಪೂರ್ವಕ ತಪ್ಪುಗಳನ್ನು ಒಳಗೊಂಡಿರುವ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ಇನ್ಸ್‌ಪೆಕ್ಟರ್ ಪ್ರಕಾಶ್ ಬಿಜಿ ವಿರುದ್ಧ ಮಾತ್ರ ಕಾನೂನು ಕ್ರಮಕ್ಕೆ ಸೆಷನ್ಸ್ ನ್ಯಾಯಾಲಯ ಶಿಫಾರಸು ಮಾಡಿದ್ದರೆ, ಸುರೇಶ್ ಅವರ ಮೇಲ್ಮನವಿ ಅರ್ಜಿಯಲ್ಲಿ ಹೆಸರಿಸಲಾದ ಎಲ್ಲಾ ಐವರು ಅಧಿಕಾರಿಗಳಿಗೆ ಕ್ರಿಮಿನಲ್ ಹೊಣೆಗಾರಿಕೆಯನ್ನು ವಿಸ್ತರಿಸಲು ಕೋರಿದ್ದಾರೆ. ತನ್ನನ್ನು "ಆರೋಪಿ" ಎಂದು ಹೇಳುವ ಬದಲು "ಬಲಿಪಶು" ಎಂದು ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ತಿದ್ದುಪಡಿ ಮಾಡಬೇಕೆಂದು ಅವರು ಹೈಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಮಲ್ಲಿಗೆ ಎಲ್ಲಿದ್ದಳು ಮತ್ತು ಆಕೆಯ ಕಣ್ಮರೆಗೆ ಕಾರಣಗಳ ಕುರಿತು ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT