ನಾಯಿಗಳಿಗೆ ವಿಷಪ್ರಾಶನ 
ರಾಜ್ಯ

ಅತ್ತ ಹುಲಿ, ಇತ್ತ ನಾಯಿಗೆ ವಿಷ ಪ್ರಾಶನ: ನರಳಿ ನರಳಿ ಪ್ರಾಣ ಬಿಟ್ಟ 5 ಬೀದಿ ನಾಯಿಗಳು!

ಬೆಂಗಳೂರಿನ ಕೆ.ಆರ್.ಪುರಂನ (KR Puram) ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರು: ಮಲೆ ಮಹದೇಶ್ವರ ಸಂರಕ್ಷಿತಾರಣ್ಯದಲ್ಲಿ 5 ಹುಲಿಗಳು ಸಾವನ್ನಪ್ಪಿದ ದಾರುಣ ಘಟನೆ ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೂ ಅಂತಹುದೇ ಘಟನೆ ವರದಿಯಾಗಿದೆ.

ಹೌದು.. ಬೆಂಗಳೂರಿನ ಕೆ.ಆರ್.ಪುರಂನ (KR Puram) ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟ ಅಮಾನವೀಯ ಘಟನೆ ನಡೆದಿದೆ. ಆರು ಬೀದಿನಾಯಿಗಳು ರಕ್ತವಾಂತಿ ಮಾಡಿಕೊಂಡಿದ್ದವು. ಈ ಆರು ನಾಯಿಗಳ ಪೈಕಿ ಐದು ನಾಯಿಗಳು ಮೃತಪಟ್ಟಿವೆ. ಐದು ಬೀದಿ ನಾಯಿಗಳು ಒದ್ದಾಡಿ ಪ್ರಾಣಬಿಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಬೀದಿ ನಾಯಿಗಳ ಸಾವಿಗೆ ಕಾರಣ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನಾಯಿಗಳ ರಕ್ತದ ಮಾದರಿ ರವಾನೆ ಮಾಡಲಾಗಿದ್ದು, ಈ ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅದು ಬೀದಿ ನಾಯಿಗಳಾಗಿರುವುದರಿಂದ ಯಾರನ್ನೂ ಅನುಮಾನಿಸಲು ಸಾಧ್ಯವಿಲ್ಲ ಎಂದು ಸ್ಥಳೀಯ ನಿವಾಸಿ ಮಹೇಶ್ ಹೇಳಿದ್ದಾರೆ. "ಯಾರೋ ನಾಯಿಗಳಿಗೆ ವಿಷಪ್ರಾಶನ ಮಾಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಅವೆಲ್ಲವೂ ಅಸ್ವಸ್ಥಗೊಂಡು ಸಾವನ್ನಪ್ಪಿವೆ" ಎಂದು ಅವರು ಹೇಳಿದರು.

ಮನೆ ಮುಂದೆ ಆಟವಾಡುತ್ತಿದ್ದ 6 ನಾಯಿಗಳು

ಸಿಸಿಟಿವಿ ದೃಶ್ಯಗಳಲ್ಲಿ, ಆರು ನಾಯಿಗಳು ಮನೆಯ ಮುಂದೆ ಆಟವಾಡುತ್ತಿರುವುದನ್ನು ಕಾಣಬಹುದು. ಈ ವೇಳೆ ಇದ್ದಕ್ಕಿದ್ದಂತೆ ನಾಯಿಗಳು ಅಸ್ವಸ್ಥಗೊಂಡಿವೆ. ಸ್ಥಳೀಯರು ಅವುಗಳನ್ನು ನೀರು ಕುಡಿಸಿ ರಕ್ಷಿಸಲು ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಆರು ನಾಯಿಗಳ ಪೈಕಿ ಐದು ಸ್ಥಳದಲ್ಲೇ ಸಾವನ್ನಪ್ಪಿವೆ. ನಾಯಿಗಳು ಸಾವಿಗೆ ಕೆಲವು ನಿಮಿಷಗಳ ಮೊದಲು ಸಾಮಾನ್ಯವಾಗಿ ಓಡಾಡುತ್ತಿದ್ದವು. ಈಗ ದಿಢೀಕ್ ಸಾವ್ನನಪ್ಪಿವೆ. ವಿಷಪ್ರಾಶನ ಆಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಇದೇ ಮೊದಲೇನಲ್ಲ..

ಇನ್ನು ಕೆಆರ್ ಪುರಂನಲ್ಲಿ ಬೀದಿನಾಯಿಗಳ ಮೇಲಿನ ದೌರ್ಜನ್ಯ ಇದೇ ಮೊದಲೇನಲ್ಲ.. ಈ ಹಿಂದೆ ಇದೇ ಪ್ರದೇಶದಲ್ಲಿ ವಾಹನವೊಂದು ಹರಿದ ಪರಿಣಾಮ ಬೀದಿ ನಾಯಿ ಸಾವಪ್ಪಿದ್ದತ್ತು.

ಜೂನ್ 17 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಹಾಲಕ್ಷ್ಮಿ ಟಿಂಬರ್ ಮಾರ್ಟ್ ಹಿಂಭಾಗದ ರಸ್ತೆಯಲ್ಲಿ ಟಾಟಾ ಏಸ್ ಸರಕು ವಾಹನದ ಚಾಲಕ ಉದ್ದೇಶಪೂರ್ವಕವಾಗಿ ಬೀದಿನಾಯಿ ಮೇಲೆ ವಾಹನ ಹರಿಸಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT