ಗೃಹ ಸಚಿವ ಡಾ.ಜಿ.ಪರಮೇಶ್ವರ್  
ರಾಜ್ಯ

ರಾಜ್ಯದಲ್ಲಿ ಮಾದಕ ದ್ರವ್ಯ ಜಾಲ ಮಟ್ಟಹಾಕಲು ಸರ್ಕಾರ ಕ್ರಮ: ತುರ್ತು ನೆರವಿಗೆ 'Raksha QR ಕೋಡ್'ಗೆ ಚಾಲನೆ

ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸಬೇಕು.

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ಜಾಲ ಮಟ್ಟ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತುರ್ತು ನೆರವಿಗಾಗಿ Raksha QR ಕೋಡ್‌ಗೆ ಚಾಲನೆ ನೀಡಿದೆ.

66ನೇ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ರಕ್ಷಾ ಕ್ಯೂಆರ್ ಕೋಡ್‌ಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಮಾದಕ ವಸ್ತು ವ್ಯಸನಕ್ಕೆ ಸಿಲುಕಿ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ರಾಜ್ಯದ ಸರಿ ಸುಮಾರು 6.5 ಲಕ್ಷ ವಿದ್ಯಾರ್ಥಿಗಳಿಗೆ ಡ್ರಗ್ಸ್ ದುಷ್ಪರಿಣಾಮ ಕುರಿತು ಅರಿವು ಮೂಡಿಸಲಾಗಿದೆ. ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಾವುದೇಕಾರಣಕ್ಕೂ ರಾಜೀಮಾಡಿಕೊಳ್ಳುವುದಿಲ್ಲ. ಡ್ರಗ್ಸ್ ಚಟುವಟಿಕೆಯ ಬಗ್ಗೆ ಗೊತ್ತಾದ ಕೂಡಲೇ ಸಾರ್ವಜನಿಕರು ಕ್ಯೂ ಆರ್‌ಕೋಡ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಬೇಕು. ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಾನೂನುಬಾಹಿರ ಕೃತ್ಯಗಳಿಗೆ ನಾಗರಿಕರು ಆಸ್ಪದ ಕೊಡಬಾರದು ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ನಡೆದಿದೆ. ಡ್ರಗ್ಸ್‌ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದರೆ, ಈ ಜಾಲವನ್ನು ಕೇವಲ ಕಾನೂನು ಮೂಲಕ ನಿಯಂತ್ರಿಸಲು ಸಾಧ್ಯವಿಲ್ಲ. ಜನರು ಜಾಗೃತರಾಗಬೇಕು ಎಂದರು.

ಈಗಾಗಲೇ ಡ್ರಗ್ಸ್ ಪೆಕ್ಲರ್‌ಗಳ ವಿರುದ್ಧ ಆಸ್ತಿ ಮುಟ್ಟುಗೋಲು ಹಾಗೂ ಗೂಂಡಾ ಕಾಯ್ದೆಯಡಿ ಪ್ರಕರಣದಂಥ ಕಠಿಣ ಕ್ರಮ ಜರುಗಿಸಲಾಗಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲೇ ಮಾದಕ ವ್ಯಸನ ಮುಕ್ತ ಕರ್ನಾಟಕ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪಂಜಾಬ್‌ನಲ್ಲಿ ಡ್ರಗ್ಸ್ ಪರಿಣಾಮದಿಂದ ಉಡ್ತಾ ಪಂಜಾಬ್ ಎಂದು ಕರೆಯುತ್ತಿದ್ದರು. ಇದಕ್ಕೆ ರಾಜ್ಯದಲ್ಲಿ ಆಸ್ಪದ ನೀಡುವುದಿಲ್ಲ. ಡ್ರಗ್ಸ್ ಚಟುವಟಿಕೆಯನ್ನು ಮಟ್ಟಹಾಕಲು ಮತ್ತಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಗುಡುಗಿದರು.

ಇದೇ ವೇಳೆ ಕಳೆದ ಒಂದು ವರ್ಷದಲ್ಲಿ ನಾಲ್ಕು ಟನ್ ಗಾಂಜಾ ಸೇರಿ 45 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 200ಕ್ಕೂ ಹೆಚ್ಚು ವಿದೇಶಿಯರನ್ನು ಗಡಿಪಾರು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಪ್ತಿಯಾದ ಡ್ರಗ್ಸ್ ಅನ್ನು ನಾಶಗೊಳಿಸುವ ಕಾರ್ಯಕ್ಕೆ ಗೃಹ ಸಚಿವರು ಆನ್‌ಲೈನ್‌ ಮೂಲಕ ಚಾಲನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT