ಮೊಳಕೆ ಕಾಳು 
ರಾಜ್ಯ

Axiom 4 Mission: ಧಾರವಾಡದ ಹೆಸರು-ಮೆಂತ್ಯ ಕಾಳು ನಭಕ್ಕೆ..!

ಬಾಹ್ಯಾಕಾಶ ಆಧಾರಿತ ಪೌಷ್ಟಿಕಾಂಶ ಸಂಶೋಧನೆಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡದ ಹೆಸರು ಕಾಳು ಮತ್ತು ಮೆಂತ್ಯ ಕಾಳುಗಳನ್ನು ಕಳುಹಿಸಲಾಗಿದೆ.

ಧಾರವಾಡ: ಶುಭಾಂಶು ಶುಕ್ಲಾ ಅವರ ಆಕ್ಸಿಯೋಂ-4 ಕಾರ್ಯಾಚರಣೆಯ ಯಶಸ್ವಿ ಉಡಾವಣೆಯನ್ನು ಭಾರತ ಹಾಗೂ ಜಗತ್ತು ಸಂಭ್ರಮಿಸುವಾಗ ಧಾರವಾಡದ ಕೃಷಿ ವಿಶ್ವವಿದ್ಯಾಲಯ ತನ್ನದೇ ಆದ ವಿಶಿಷ್ಟ ಮೈಲಿಗಲ್ಲನ್ನು ದಾಖಲಿಸುತ್ತಿದೆ.

ಬಾಹ್ಯಾಕಾಶ ಆಧಾರಿತ ಪೌಷ್ಟಿಕಾಂಶ ಸಂಶೋಧನೆಗಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡದ ಹೆಸರು ಕಾಳು ಮತ್ತು ಮೆಂತ್ಯ ಒಣ ಬೀಜಗಳನ್ನು ಕಳುಹಿಸಲಾಗಿದೆ.

ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ ಹೆಸರುಕಾಳು ಮತ್ತು ಮೆಂತ್ಯ ಬೀಜಗಳ ಪ್ಯಾಕ್ ಗಳನ್ನು ರವಾನಿಸಲಾಗಿದೆ. ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಈ ಬೀಜಗಳಿಗೆ ನೀರು ಹಾಕುತ್ತಾರೆ. ಎರಡರಿಂದ ನಾಲ್ಕು ದಿನಗಳಲ್ಲಿ ಮೊಳಕೆಯೊಡೆಯುತ್ತವೆ. ಮೊಳಕೆ ಕಾಳುಗಳನ್ನು ಬಾಹ್ಯಾಕಾಶದಲ್ಲಿ ಶೈತ್ಯ ಘಟಕದಲ್ಲಿ ಇಟ್ಟು ನಂತರ ಭೂಮಿಗೆ ಹಿಂದಿ‌ರುಗಿಸುತ್ತಾರೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್‌.ಪಾಟೀಲ್ ಅವರು ಹೇಳಿದ್ದಾರೆ.

ಮೊಳಕೆ ಕಾಳುಗಳನ್ನು ವಾಪಸ್‌ ಭೂಮಿಗೆ ತಂದ ನಂತರ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲಾಗುವುದು. ಮೊಳಕೆ ಪ್ರಮಾಣ, ಅವುಗಳ ಪೋಷಕಾಂಶ ಗುಣಮಟ್ಟ, ಫೈಟೋಹಾರ್ಮೊನ್‌ಗಳ ಚಟುವಟಿಕೆ ಹಾಗೂ ಜೀವಸೂತ್ರ (ಟ್ರಾನ್ಸ್‌ ಕ್ರಿಪ್ಟೋಮ್‌) ಪರೀಕ್ಷಿಸಿ ವಿಶ್ಲೇಷಿಸಲಾಗುವುದು. ಅಲ್ಲದೇ ಮೊಳಕೆಯ ಮೇಲೆ ಮೈಕ್ರೋಬಿಯಲ್‌ ಬೆಳವಣಿಗೆ ಅಧ್ಯಯನ ಮಾಡಲಾಗುವುದು.

ಈ ಸಂಶೋಧನೆಯು ಭವಿಷ್ಯದಲ್ಲಿ ಅಂತರಿಕ್ಷಯಾನದಲ್ಲಿ ಭಾರತೀಯರ ಆಹಾರದ ಭಾಗವಾಗಬಲ್ಲ ಆರೋಗ್ಯಕರ ಸಲಾಡ್‌ ತರಕಾರಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮೊಳಕೆಯೊಡೆಯುವ ಬೀಜಗಳನ್ನು ಬೆಳೆಸಲು ಕೇವಲ ಕಂಟೇನರ್‌, ನೀರು ಇದ್ದರೆ ಸಾಕು. ಮೊಳಕೆ ಕಾಳುಗಳು ಪೋಷಕಾಂಶಭರಿ‌ತವಾಗಿರುತ್ತವೆ. ಗಗನಯಾನ ಮಿಷನ್‌ ಭವಿಷ್ಯದ ಯಾತ್ರಿಕರ ಆಹಾರ ಗಮನದಲ್ಲಿಟ್ಟುಕೊಂಡು ಈ ಸಂಶೋಧನೆಗೆ ಹೆಸರು, ಮೆಂತ್ಯೆ ಬೀಜಗಳ ಮೊಳಕೆ ಅಧ್ಯಯನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಮೊಳಕೆಯೊಡೆದ ಹೆಸರುಕಾಳು ಮತ್ತು ಮೆಂತ್ಯೆ ಗಗನಯಾತ್ರಿಗಳಿಗೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತದೆ. ಮೂತ್ರಕೋಶದಲ್ಲಿ ಕಲ್ಲು ರಚನೆಯ ಅಪಾಯವನ್ನೂ ಕಡಿಮೆ ಮಾಡುತ್ತದೆ. ಹೃದಯಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗಗನಯಾತ್ರಿಗಳ ಅರೋಗ್ಯದ ದೃಷ್ಟಿಯಿಂದ ಸಂಶೋಧನೆಗೆ ಈ ಬೀಜಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

"ಜೈವಿಕ ತಂತ್ರಜ್ಞಾನ ವಿಭಾಗದ (ಯುಎಎಸ್) ಸಹಾಯಕ ಪ್ರಾಧ್ಯಾಪಕ ಪ್ರಧಾನ ತನಿಖಾಧಿಕಾರಿ ರವಿಕುಮಾರ್ ಹೊಸಮಣಿ ಮತ್ತು ಐಐಟಿ ಧಾರವಾಡದ ಸಹ-ತನಿಖಾಧಿಕಾರಿ ಸುಧೀರ್ ಸಿದ್ದಾಪುರರೆಡ್ಡಿ ಈ ಯೋಜನೆಗೆ ಕೊಡುಗೆ ನೀಡಿದ್ದಾರೆ.

ದೀರ್ಘಕಾಲೀನ ಮಾನವ ಬಾಹ್ಯಾಕಾಶ ಪರಿಶೋಧನೆಯನ್ನು ಬೆಂಬಲಿಸಲು ಸಸ್ಯ ಆಧಾರಿತ ಆಹಾರ ಉತ್ಪಾದನಾ ವ್ಯವಸ್ಥೆಯು ನಿರ್ಣಾಯಕವಾಗಿದೆ. ಲೆಟಿಸ್, ಟೊಮೆಟೊ, ಮೂಲಂಗಿ, ಎಲೆಕೋಸು, ಕ್ಯಾರೆಟ್ ಮತ್ತು ಈರುಳ್ಳಿಯಂತಹ ಸಲಾಡ್'ಗೆ ಬಳಸುವ ತರಕಾರಿಗಳನ್ನು ತಾಜಾವಾಗಿ ತಿನ್ನಬಹುದು, ಇದು ಬಾಹ್ಯಾಕಾಶದಲ್ಲಿ ಸಿಬ್ಬಂದಿಗಳಿಗೆ ಆಹಾರವನ್ನು ಪೂರೈಸಲು ಸೂಕ್ತವಾಗಿದೆ. ಆದಾಗ್ಯೂ, ಬಾಹ್ಯಾಕಾಶದಲ್ಲಿ ಸಸ್ಯಗಳನ್ನು ಬೆಳೆಸಲು ಬೆಳಕು, ತಾಪಮಾನ, ಆರ್ದ್ರತೆ, CO2 ಮಟ್ಟ ಮತ್ತು ನೀರಿನ ಪೋಷಕಾಂಶ ವಿತರಣಾ ವ್ಯವಸ್ಥೆ ಸೇರಿದಂತೆ ಸಂಕೀರ್ಣ ನಿಯಂತ್ರಿತ ಪರಿಸರಗಳು ಬೇಕಾಗುತ್ತವೆ.

ಪಾಶ್ಚಿಮಾತ್ಯ ಗಗನಯಾತ್ರಿಗಳಿಗೆ ಹೋಲಿಸಿದರೆ ಭಾರತೀಯ ಗಗನಯಾತ್ರಿಗಳು ವಿಭಿನ್ನ ಆಹಾರ ಆದ್ಯತೆಗಳು ಮತ್ತು ಆನುವಂಶಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಹೀಗಾಗಿ ಭಾರತ ಬಾಹ್ಯಾಕಾಶ ಕೃಷಿ, ಆಹಾರ ಮತ್ತು ಪೌಷ್ಟಿಕಾಂಶ ಸಂಶೋಧನೆಯ ಮೇಲೆ ಗಮನಹರಿಸುವುದು ಅತ್ಯಗತ್ಯವಾಗಿದೆ.

ಮೊಳಕೆಯೊಡೆದ ಬೀಜಗಳನ್ನು ಇಲ್ಲಿ ಮತ್ತು ಬಾಹ್ಯಾಕಾಶದಲ್ಲಿ ಬೆಳೆದ ಬೀಜಗಳೊಂದಿಗೆ ಹೋಲಿಸಿ, ಪೋಷಣೆ ಮತ್ತು ಇತರ ನಿಯತಾಂಕಗಳನ್ನು ಒಳಗೊಂಡಂತೆ ವ್ಯತ್ಯಾಸವನ್ನು ಪರಿಶೀಲಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT